Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತಮಿಳುನಾಡು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಲಂಚ ಹಗರಣ; ತನಿಖೆಗೆ ಇಡಿ ಒತ್ತಾಯ

Spread the love

ಚೆನ್ನೈ: ತಮಿಳುನಾಡು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಲಂಚ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

ರಿಯಲ್ ಎಸ್ಟೇಟ್ ಸಂಸ್ಥೆ ಟಿವಿಹೆಚ್ ಮತ್ತು ಡಿಎಂಕೆ ಸಚಿವ ಕೆ.ಎನ್.ನೆಹರು ಅವರ ಸಂಬಂಧಿ ಒಳಗೊಂಡ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿಯ ಸಂದರ್ಭದಲ್ಲಿ ಈ ಹಗರಣ ಬೆಳಕಿಗೆ ಬಂದಿದೆ ಎಂದು ತಮಿಳುನಾಡು ಪೊಲೀಸರಿಗೆ ಇಡಿ ತಿಳಿಸಿದೆ

ಸಹಾಯಕ ಎಂಜಿನಿಯರ್‌ಗಳು, ಜೂನಿಯರ್ ಎಂಜಿನಿಯರ್‌ಗಳು ಮತ್ತು ಪಟ್ಟಣ ಯೋಜನಾ ಅಧಿಕಾರಿಗಳಂತಹ ಹುದ್ದೆಗಳನ್ನು ಪಡೆಯಲು ಅಭ್ಯರ್ಥಿಗಳು 25 ಲಕ್ಷದಿಂದ 35 ಲಕ್ಷ ರೂ.ಗಳವರೆಗೆ ಲಂಚವನ್ನು ನೀಡಿದ್ದಾರೆ ಎಂದು ತಮಿಳುನಾಡು ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಇಡಿ ಆರೋಪಿಸಿದೆ. ಆ.6 ರಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ಹಸ್ತಾಂತರಿಸಿದ್ದಾರೆ.

2024–2025 ಮತ್ತು 2025–2026 ವರ್ಷಗಳ ನೇಮಕಾತಿ ಪ್ರಕ್ರಿಯೆಯನ್ನು ಜಾಣ್ಮೆಯಿಂದ ನಿರ್ವಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಕೆಲವು ವ್ಯಕ್ತಿಗಳಿಗೆ ಪರೀಕ್ಷಾ ಮಾಹಿತಿ ಮೊದಲೇ ಲಭ್ಯವಿತ್ತು. ಲಂಚದ ಹಣವನ್ನು ನಗದು ರೂಪದಲ್ಲಿ ಸಂಗ್ರಹಿಸಿ ಹವಾಲಾ ಮಾರ್ಗಗಳ ಮೂಲಕ ರವಾನಿಸಲಾಗಿದೆ ಎಂದು ಆರೋಪಿಸಿದೆ.

ಲಂಚ ನೀಡಿದ ಸುಮಾರು 150 ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಪೊಲೀಸರಿಗೆ ಬರೆದ ಪತ್ರದಲ್ಲಿ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಹಲವಾರು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಇಡಿ ಹೆಸರಿಸಿದೆ.

ರಾಜ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರವೇ ಇಡಿ ತನಿಖೆ ಆರಂಭಿಸಬೇಕಾಗುತ್ತದೆ. ಹೀಗಾಗಿ, ಹಗರಣದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ತಮಿಳುನಾಡು ಪೊಲೀಸರಿಗೆ ಇಡಿ ಒತ್ತಾಯಿಸಿದೆ.


Spread the love
Share:

administrator

Leave a Reply

Your email address will not be published. Required fields are marked *