Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಣೆಗೆ ಸಿಂಧೂರ ಹಚ್ಚುವ ಹೊತ್ತಲ್ಲೇ ವಧುವಿಗೆ ಗುಂಡೇಟು; ಪರಾರಿಯಾದ ಆರೋಪಿಗಾಗಿ ಶೋಧ.

Spread the love

ಬಕ್ಸಾರ್: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ.


ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು, ಜನರು ಭಯಭೀತರಾಗಿ, ಕಿರುಚುತ್ತಾ ಹೊರಗೆ ಓಡಿಹೋದರು. ಆರತಿ ಕುಸಿದು ಬಿದ್ದಾಗ ಕೆಲವರು ಆಕೆ ಪ್ರಜ್ಞೆ ತಪ್ಪದಂತೆ ನೋಡಿಕೊಳ್ಳಲು ಪ್ರಯತ್ನಿಸಿದರು. ಆರತಿಯನ್ನು ತಕ್ಷಣವೇ ಹತ್ತಿರದ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಅವರನ್ನು ವಾರಾಣಸಿ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಆರತಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸ್ಥಳೀಯರ ಪ್ರಕಾರ, ಗುಂಡಿನ ದಾಳಿ ಘಟನೆಗೆ ಶಂಕಿತ ಪ್ರೇಮ ಪ್ರಕರಣ ಕಾರಣ ಎನ್ನಲಾಗಿದೆ. ಶಂಕಿತ ದೀನಬಂಧು ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆರೋಪಿಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದು, ಅವರನ್ನು ವಶಕ್ಕೆ ಪಡೆದಿದ್ದಾರೆ.ದೀನಬಂಧು ಈ ಹಿಂದೆ ಮದ್ಯದ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಮದುವೆ ಮೆರವಣಿಗೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಿಂದ ಬಂದಿತ್ತು. ಘಟನೆ ನಡೆದ ಕೂಡಲೇ ಅದು ಹಿಂತಿರುಗಿತು.


Spread the love
Share:

administrator

Leave a Reply

Your email address will not be published. Required fields are marked *