ಟ್ರೆಕ್ಕಿಂಗ್ ವೇಳೆ ಕಾಲು ಜಾರಿ ಬಿದ್ದು ಸಿಎ ವಿದ್ಯಾರ್ಥಿ ಸಾವು

ಮೂಡಬಿದಿರೆ : ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ತೆರಳಿದ ವೇಳೆ ಆಕಸ್ಮಿಕವಾಗಿ ಜಾರಿಬಿದ್ದು ಸಿಎ ವಿಧ್ಯಾರ್ಥಿ ಸಾವನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟವರನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಎಂದು ಗುರುತಿಸಲಾಗಿದೆ.

ಮನೋಜ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು. ಟ್ರೆಕ್ಕಿಂಗ್ ವೇಳೆ ಮನೋಜ್ ಆಕಸ್ಮಿಕವಾಗಿ ಜಾರಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
