Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಕಾರು– ಪವಾಡ ಸದೃಶ್ಯವಾಗಿ ಪಾರಾದ ಪ್ರಯಾಣಿಕರು

Spread the love

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸುಮಾರು 100 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಕಾರು‌ 100 ಆಳದ ಪ್ರಪಾತಕ್ಕೆ ಬಿದ್ದರೂ ಕಾರಿನಲ್ಲಿದ್ದ ಐವರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಆರು ಜನರ ಕುಟುಂಬ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಧಾರ್ಮಿಕ ಪ್ರವಾಸ ಹೊರಟಿದ್ದರು. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆರಂಭದಲ್ಲೇ ಮಲಯ ಮಾರುತ ಬಳಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ.

ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು, ಉಳಿದ ಎರಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಸದ್ಯ ಚಿಕಿತ್ಸೆಗಾಗಿ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಸಮಾಜ ಸೇವಕ ಆರೀಫ್ ಕೂಡಲೇ ಸ್ಥಳಕ್ಕೆ ತೆರಳಿ ಎಲ್ಲರನ್ನೂ ಮೇಲೆತ್ತಿ ಆಂಬುಲೆನ್ಸ್‌ನಲ್ಲಿ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಅಪಘಾತ ಸ್ಥಳದಲ್ಲಿ ತಡೆಗೋಡೆ ಅಳವಡಿಸದೇ ಇರುವುದೇ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಸಂಭಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *