ʼಸೈಬರ್ ಪೊಲೀಸ್ ಆಗಿ ನಟಿಸಿ ಸುಲಿಗೆʼ – ಫೇಸ್ಬುಕ್ನಲ್ಲಿ ಜನರನ್ನು ಹೆದರಿಸಿ 1.23 ಲಕ್ಷ ಕಸಿದ ಅರುಣ್ ಬಂಧನ

ಮಂಗಳೂರು: ಬೆಂಗಳೂರಿನ ಸೈಬರ್ ಅಪರಾಧ ಅಧಿಕಾರಿಯಂತೆ ನಟಿಸಿ ಫೇಸ್ಬುಕ್ ಬಳಕೆದಾರರಿಂದ 1.23 ಲಕ್ಷ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ತುಮಕೂರಿನ ಸೈಬರ್ ಅಪರಾಧಿಯೊಬ್ಬನನ್ನು ಮಂಗಳೂರು ಕೇಂದ್ರ ಅಪರಾಧ ಪೊಲೀಸರು ಬಂಧಿಸಿದ್ದಾರೆ.

ಆರೋಪಿ, ದಿವಂಗತ ತಿಮ್ಮರಾಜು ಅವರ ಪುತ್ರ ಮತ್ತು ಕೋತಿಟೋಪುವಿನ ಬಾರ್ ಲೈನ್ ರಸ್ತೆಯ ಚಾಮುಂಡೇಶ್ವರಿ ದೇವಸ್ಥಾನದ ಬಳಿ ವಾಸಿಸುವ ಅರುಣ್ ಟಿ (27) ಎಂದು ಗುರುತಿಸಲಾಗಿದೆ. ಜುಲೈ 15 ರಂದು ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 37/2025 ರ ಅಡಿಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಸಿ), 66(ಡಿ) ಮತ್ತು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 112, 308(2), 318(4) ರ ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದೆ.ಪೊಲೀಸರ ಪ್ರಕಾರ, ಆರೋಪಿಯು ಪೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್ , ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಬೆಂಗಳೂರು ಸುಶೀಲ್ ಕುಮಾರ ಎಂದು ಹೇಳಿ ತನ್ನನ್ನು ಪರಿಚಯಿಸಿಕೊಂಡು ನಿಮ್ಮ ಮೇಲೆ ದೂರುಗಳು ಬಂದಿದೆ ನಿಮ್ಮನ್ನು ಅರೆಸ್ಟ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ ಎಂದು ವರದಿಯಾಗಿದೆ. ದೂರುದಾರರನ್ನು ಹೆದರಿಸಿ ಅರುಣ್ ಅವರ ಬ್ಯಾಂಕ್ ಖಾತೆಗೆ 1.23 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾನೆ.ಆರೋಪಿತನ ಮೇಲೆ ಸೈಬರ್ ಪೊರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿದೆ. ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿ ಆರೋಪಿತನನ್ನು ತುಮಕೂರಿನಲ್ಲಿ ಬಂಧಿಸಿ ಈ ದಿನ ಮಾನ್ಯ ನ್ಯಾಯಾಲಯದ ಮುಂದೆ ಹಾಜರಿಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
