ಗೃಹಿಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕಸಿದು ಪರಾರಿ

ಮಧುಗಿರಿ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ವಡೇರಹಳ್ಳಿಯಲ್ಲಿ ಮಂಗಳವಾರ ಮನೆಯೊಳಗಿದ್ದ ಗೃಹಿಣಿಯ ಕಣ್ಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.
ಗ್ರಾಮದ ಮಂಜುನಾಥ್ ಅವರ ಪತ್ನಿ ಕಾಂತಮ್ಮ (55) ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಬಂದು ಮಹಿಳೆಯ ಕಣ್ಣಿಗೆ ಕಾರದಪುಡಿ ಎರಚಿ ಕೊರಳನಿಲ್ಲಿದ್ದ 55 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾನೆ.
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ