Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಂಗಲ್ಯ ಸರಕ್ಕಾಗಿ ಮಹಿಳೆಯ ಪ್ರಾಣ ತೆಗೆದ ಸರಗಳ್ಳರು

Spread the love

ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ (Mangalsutra) ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ (Nelamangala) ಬಳಿಯ ಹುಸ್ಕೂರು (Huskuru) ಗ್ರಾಮದಲ್ಲಿ ನಡೆದಿದೆ.

ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಆಕೆಯ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ ಪರಿಣಾಮ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಜ್ಯೋತಿ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *