Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಾಣಿವಿಲಾಸ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಔಷಧ ಕೇಳಿದ ರೋಗಿಗಳಿಗೆ ಸಿಬ್ಬಂದಿಯಿಂದ ಉಡಾಫೆ ಉತ್ತರ; ವೈದ್ಯಕೀಯ ಸೇವೆಗೆ ಧಕ್ಕೆ

Spread the love

ಬೆಂಗಳೂರು: ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ (Vanivilas Government Hospital) ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದ್ರೆ ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ ಕರ್ಮಕಾಂಡ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೌದು. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಮೆಡಿಸಿನ್ ಶಾರ್ಟೆಜ್ (Medicines Shortage) ಇದೆ. ಅಗತ್ಯ ಔಷಧಿಗಳು ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ (Private Medical) ಕಾಸು ಕೊಟ್ಟು ಔಷಧ ಖರೀದಿ ಮಾಡ್ತಿದ್ದಾರೆ. ಆದ್ರೆ ಔಷಧ ಕೊಡಿ ಅಂತ ರೋಗಿಗಳು ಕೇಳಿದ್ರೆ ಖಾಲಿಯಾಗಿದೆ, ಸಿಎಂ ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

ಸಮಸ್ಯೆ ಆಗಿದ್ರೆ ಸರಿಪಡಿಸುವ ಕೆಲಸ ಮಾಡ್ತೇವೆ
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧಿಗಳ ಪೂರೈಕೆಯಲ್ಲಿ ವ್ಯತ್ಯಯ ಆಗ್ತಿದೆ. ಇದರಿಂದ ವಾಣಿವಿಲಾಸ ಆಸ್ಪತ್ರೆಗೆ ಅಗತ್ಯ ಔಷಧಿಗಳು ಪೂರೈಕೆ ಆಗ್ತಿಲ್ಲ. ಕೆಲ ಮಾತ್ರೆಗಳು ಮಾತ್ರ ಸ್ಟಾಕ್ ಇದೆ ಎನ್ನಲಾಗ್ತಿದೆ. ಇನ್ನೂ ಈ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ, ಸಮಸ್ಯೆ ಆಗಿದ್ರೆ ಮಾಹಿತಿ ಪಡೆದು ಸರಿಪಡಿಸುವ ಕೆಲಸ ಮಾಡಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಉಚಿತವಾಗಿ ಸಿಗುತ್ತೆ ಅಂತ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿದ್ರು. ಈಗ ಆಸ್ಪತ್ರೆಯಲ್ಲಿ ಔಷಧಿಗಳೇ ಸಿಗ್ತಿಲ್ಲ. ಔಷಧಿ ಖರೀದಿಗೆ ಕರೆಯಲಾಗಿರುವ ಟೆಂಡರ್‌ ಕೂಡ ಅಂತಿಮ ಆಗಿಲ್ಲ. ಹೀಗಾಗಿ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಿಸುವಂತಾಗಿದೆ. ಇದನ್ನೂ ಓದಿ: ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು


Spread the love
Share:

administrator

Leave a Reply

Your email address will not be published. Required fields are marked *