Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಆಸ್ಪತ್ರೆಗೆ ದಾಖಲು – ತೀವ್ರ ಸೋಂಕಿಗೆ ಚಿಕಿತ್ಸೆ

Spread the love

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ಅವರಿಗೆ ತೀವ್ರ ಸೋಂಕು ತಗುಲಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿ ಗವಾಯಿ ಪ್ರಸ್ತುತ ವೈದ್ಯಕೀಯ ನಿಗಾದಲ್ಲಿದ್ದಾರೆ. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಅವರ ಅನಾರೋಗ್ಯದಿಂದಾಗಿ ಸಿಜೆಐ ಬಿಆರ್ ಗವಾಯಿ ಇಂದು ನ್ಯಾಯಾಲಯದ ವಿಚಾರಣೆಯ ಅಧ್ಯಕ್ಷತೆ ವಹಿಸಿರಲಿಲ್ಲ. ಈ ವಿಷಯದ ಮಾಹಿತಿ ನೀಡಿರುವ ಅಧಿಕಾರಿಗಳು, ಮುಖ್ಯ ನ್ಯಾಯಮೂರ್ತಿಗಳು ಸ್ಥಿರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಮುಂದಿನ ಒಂದೆರಡು ದಿನಗಳಲ್ಲಿ ತಮ್ಮ ಅಧಿಕೃತ ಜವಾಬ್ದಾರಿಗಳಿಗೆ ಮರಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಬಿ.ಆರ್ ಗವಾಯಿ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅವರಿಗೆ ತಗುಲಿರುವ ಸೋಂಕಿನ ಬಗ್ಗೆ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. “ಸಿಜೆಐ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಿ ಕರ್ತವ್ಯಕ್ಕೆ ಮರಳುವ ನಿರೀಕ್ಷೆಯಿದೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದಕ್ಕೂ ಮೊದಲು ಸಿಜೆಐ ಜುಲೈ 12ರಂದು ನಲ್ಸರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಭಾಷಣ ಮಾಡಲು ಹೈದರಾಬಾದ್‌ಗೆ ತೆರಳಿದ್ದರು. ಅದೇ ದಿನ, ಅವರು “ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ – ಸಂವಿಧಾನ ಸಭೆ – ಭಾರತದ ಸಂವಿಧಾನ” ಎಂಬ ಶೀರ್ಷಿಕೆಯ ವಿಶೇಷ ಅಂಚೆ ಕವರ್ ಮತ್ತು “ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿ” ಕುರಿತು ಫೋಟೋ ಪೋಸ್ಟ್‌ಕಾರ್ಡ್‌ಗಳ ಸೆಟ್ ಅನ್ನು ಬಿಡುಗಡೆ ಮಾಡಿದರು. ಅದಾದ ನಂತರ ಸಿಜೆಐ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.


Spread the love
Share:

administrator

Leave a Reply

Your email address will not be published. Required fields are marked *