ಚಿಕ್ಕಮಗಳೂರು ಡಬಲ್ ಡೆತ್ ಕೇಸ್: ಪ್ರೇಮದ ಅಮಲು ಕೊಲೆ-ಆತ್ಮಹತ್ಯೆಗೆ ಕಾರಣವಾಯಿತೇ?

ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.
ಮೃತ ಯುವಕನನ್ನು ಮೂಲತಃ ಶಿವಮೊಗ್ಗದ ಭದ್ರಾವತಿಯ ಮಧು ಎಂದು ಗುರುತಿಸಲಾಗಿದ್ದು, ಕಾರು ಡ್ರೈವರ್ ಆಗಿದ್ದ ಹಾಗೂ ಯುವತಿಯನ್ನು ಪೂರ್ಣಿಮಾ ಎಂದು ತಿಳಿಯಲಾಗಿದ್ದು, ಮಾಗಡಿಯ ಖಾಸಗಿ ಹೈಸ್ಕೂಲ್ನಲ್ಲಿ ಶಿಕ್ಷಕಿಯಾಗಿದ್ದರು. ಮಧು ರಾಮನಗರದ ಮಾಗಡಿಯಲ್ಲಿ ಕಾರು ಡ್ರೈವ್ ಮಾಡಿಕೊಂಡು ಕಳೆದ ನಾಲ್ಕೈದು ವರ್ಷಗಳಿಂದ ಪೂರ್ಣಿಮಾ ಪಕ್ಕದ ಮನೆಯಲ್ಲಿ ವಾಸವಾಗಿದ್ದ. ಪೂರ್ಣಿಮಾ ಕುಟುಂಬದ ಜೊತೆ ವಿಶ್ವಾಸ-ಸ್ನೇಹ ಇತ್ತು. ಅವರ ಮನೆಯ ಎಲ್ಲಾ ಕಾರ್ಯಕ್ರಮಗಳಲ್ಲೂ ಮಧು ಭಾಗವಹಿಸುತ್ತಿದ್ದ. ಕಳೆದ ಏಳೆಂಟು ತಿಂಗಳ ಹಿಂದೆ ಪೂರ್ಣಿಮಾ ತಂಗಿಯ ಮದುವೆಯಾಗಿತ್ತು. ಆ ಮದುವೆಯಲ್ಲೂ ಮಧು ಭಾಗಿಯಾಗಿ ಎಲ್ಲಾ ಕೆಲಸ ಮಾಡಿದ್ದನು. ಮದುವೆಗೆ ಈತನ ಕಾರನ್ನ ಬಾಡಿಗೆ ಪಡೆದಿದ್ದರು.