Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಲಿತ ಮಹಿಳೆ ಅಡುಗೆಗೆ ನೇಮಕವಾದದ್ದಕ್ಕೆ ಬೇರೆ ಶಾಲೆಗೆ ಹೋಗುತ್ತಿರುವ ಮಕ್ಕಳು

Spread the love

ಚಾಮರಾಜನಗರ:ಅಸ್ಪೃಶ್ಯತೆ ಆಚರಣೆ ವಿರುದ್ಧ ಜಾಗೃತಿ ಮತ್ತು ಬಿಗಿ ಕಾನೂನು ಇದ್ದರೂ ಅನಿಷ್ಠ ಪಿಡುಗು ಇನ್ನೂ ಜೀವಂತ ಆಗಿರುವುದಕ್ಕೆ ಚಾಮರಾಜನಗರದ ಈ ಸರ್ಕಾರಿ ಶಾಲೆಯೇ ನಿದರ್ಶನವಾಗಿದೆ.

ಚಾಮರಾಜನಗರ ತಾಲೂಕಿನ ಹೊಮ್ಮ ಎಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕವಾದ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ಶಾಲೆ ಬಿಡಿಸಿ ಬೇರೆ ಶಾಲೆಗೆ ಸೇರಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

2024-25ನೇ ಸಾಲಿನಲ್ಲಿ 22 ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ ಸದ್ಯ ಓರ್ವ ವಿದ್ಯಾರ್ಥಿಗೆ ಕುಸಿದಿದ್ದು, ಈಗಾಗಲೇ 12 ಮಕ್ಕಳು ಟಿಸಿ ಪಡೆದುಕೊಂಡಿದ್ದಾರೆ. ಉಳಿದ ವಿದ್ಯಾರ್ಥಿಗಳು ಸಹ ಟಿಸಿ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ.

ಈಗ ಈ ಸರ್ಕಾರಿ ಶಾಲೆಯು ಖಾಲಿ-ಖಾಲಿ ಹೊಡೆಯುತ್ತಿದ್ದು, ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿದೆ. ಹೊಮ್ಮ ಸರ್ಕಾರಿ ಶಾಲೆಯಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಹಾಜರಾಗುತ್ತಿದ್ದು, ಇಬ್ಬರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಗ್ರಾಮದ ಮಲ್ಲಯ್ಯ ಎಂಬವರು, ʼಈ ಹಿಂದೆ ಬೇರೆ ಸಮುದಾಯದ ಮಹಿಳೆ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅದಾದ ಬಳಿಕ ದಲಿತ ಮಹಿಳೆಯೊಬ್ಬರನ್ನು ನೇಮಕ ಮಾಡಿದ ಬಳಿಕ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ ಎಂದಿದ್ದಾರೆ.

ಈ ಶಾಲೆಯಲ್ಲಿ ಈಗ ಕೇವಲ ಒಬ್ಬ ವಿದ್ಯಾರ್ಥಿ ಮತ್ತು ಇಬ್ಬರು ಶಿಕ್ಷಕರು ಇದ್ದಾರೆ. ಆ ಒಬ್ಬ ವಿದ್ಯಾರ್ಥಿಯನ್ನೂ ಬೇರೆಡೆ ಸೇರಿಸಲು ಪೋಷಕರು ಟಿಸಿ ಕೇಳಿದ್ದಾರೆ. ಹಿಂದೆ ಶಿಕ್ಷಕರು ಸರಿಯಾಗಿ ಪಾಠ-ಪ್ರವಚನ ಮಾಡುತ್ತಿಲ್ಲವೆಂದು ಪೋಷಕರು ಪ್ರತಿಭಟಿಸಿದ್ದರು. ಆ ವೇಳೆ ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರಿಸಿತ್ತು. ಇದೀಗ ಈ ಶಾಲೆಯಲ್ಲಿ ಮತ್ತೊಂದು ಸಮಸ್ಯೆ ಉದ್ಭವವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *