Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನಸ್ವಾಮಿ ಕಾಲ್ತುಳಿತ: ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು, ಸಿಐಡಿಗೆ ಮಾಹಿತಿ ನೀಡಲು ಸೂಚನೆ

Spread the love

11 die in Bengaluru stampede as RCB victory celebrations turn tragic - The  Hindu

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಸಿಐಡಿಗೆ ಪತ್ರ ಬರೆದಿದೆ.

ಪತ್ರದಲ್ಲೇನಿದೆ?: ‘ಆರ್‌ಸಿಬಿ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯನ್ನು ಗೆದ್ದಿದ್ದರಿಂದ ತಂಡವನ್ನು ರಾಜ್ಯಕ್ಕೆ ಸ್ವಾಗತಿಸಿ, ಅಭಿನಂದಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಈ ಕಾರ್ಯಕ್ರಮವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭವನ್ನು ವೀಕ್ಷಿಸಲು ಬೆಂಗಳೂರಿನ ಹಾಗೂ ಇತರ ಜಿಲ್ಲೆಗಳಿಂದ ಸಾಕಷ್ಟು ಸಾರ್ವಜನಿಕರು ಭಾಗವಹಿಸಿದ್ದರು.

ಇದರಲ್ಲಿ ಮಕ್ಕಳೂ ಸಹ ಇದ್ದರು ಎಂಬ ಅಂಶವು ಆಯೋಗದ ಗಮನಕ್ಕೆ ಬಂದಿದೆ. ಈ ಸಮಾರಂಭ ನಡೆಯುವ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಕೆಲವು ದ್ವಾರಗಳ ಮುಂದೆ ಜನಸಂಖ್ಯೆಯ ಒತ್ತಡವು ಹೆಚ್ಚಾಗಿದ್ದು, ಸಾರ್ವಜನಿಕರನ್ನು ನಿಯಂತ್ರಿಸುವಲ್ಲಿ ವೈಫಲ್ಯ ಉಂಟಾಗಿದ್ದರಿಂದ 11 ಜನರು ಕಾಲ್ತುಳಿತಕ್ಕೆ ಒಳಗಾಗಿ ಸಾವಿಗೀಡಾಗಿರುವುದು ಈಗಾಗಲೇ ಸುದ್ದಿ ಮಾಧ್ಯಮದಲ್ಲಿ ವರದಿಯಾಗಿದ್ದು, ಈ ಬಗ್ಗೆ ಸರಕಾರ ಹಾಗೂ ಹೈಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಈ ಅವಘಡದಲ್ಲಿ ಮಕ್ಕಳಿಗೂ ಸಹ ತೊಂದರ ಉಂಟಾಗಿರುವ ಹಿನ್ನೆಲೆ ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಇದುವರೆವಿಗೂ ಮಕ್ಕಳಿಗೆ ಉಂಟಾದ ತೊಂದರೆಯ ವಿವರಗಳು ನಿಖರವಾಗಿ ತಿಳಿದು ಬಂದಿರುವುದಿಲ್ಲ’ ಎಂದು ಆಯೋಗದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಂದುವರಿದು, ‘ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬಂದಿದ್ದ ಸಾರ್ವಜನಿಕರು ಹಾಗೂ ಅದರಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಕಾಲ್ತುಳಿತದಿಂದ ಉಂಟಾದ ಮತ್ತು ಇತರೆ ಸಮಸ್ಯೆಗಳ ಕುರಿತು ಮಾಹಿತಿಯನ್ನು ಹಾಗೂ ಎಷ್ಟು ಮಕ್ಕಳು ಈ ಅವಘಡಕ್ಕೆ ಒಳಗಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ಕೂಡಲೇ ಒದಗಿಸಬೇಕು’ ಎಂದು ಸಿಐಡಿಗೆ ಪತ್ರದಲ್ಲಿ ಕೋರಲಾಗಿದ


Spread the love
Share:

administrator

Leave a Reply

Your email address will not be published. Required fields are marked *