Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿತ್ರದುರ್ಗದಲ್ಲಿ ಕಾರು ಚಾಲಕ 97 ಲಕ್ಷ ರೂ. ಕಳ್ಳತನ – ಪೊಲೀಸ್ ಸಿನಿಮಾ ಶೈಲಿಯಲ್ಲಿ ಆರೋಪಿಯ ಬಂಧನ

Spread the love

ಚಿತ್ರದುರ್ಗ: ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು ಪಾರಾರಿಯಾಗಿದ್ದ. ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿ ಬೆನ್ನತ್ತಿ ಹೆಡೆಮುರಿ ಕಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿಯೊಂದಿಗೆ ಬಳ್ಳಾರಿಯಲ್ಲಿ ಜಮೀನು ಮಾರಾಟ ಮಾಡಲು ಬಾಡಿಗೆ ಕಾರಿನಲ್ಲಿ ತೆರಳಿದ್ದರು. ಅಲ್ಲಿ ಸರಿ ಸುಮಾರು 97 ಲಕ್ಷ ರೂ.ಗೆ ಜಮೀನು ಮಾರಾಟ ಮಾಡಿದ್ದು, ಕಾರಲ್ಲಿಯೇ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ಚಳ್ಳಕೆರೆಯಲ್ಲಿ ಊಟಕ್ಕೆಂದು ಕಾರು ನಿಲ್ಲಿಸಿ ತೆರಳಿದ್ದರು. ಆಗ ಕಾರು ಚಾಲಕ ಇವರಿಗೆ ಗೊತ್ತಿಲ್ಲದೇ 97 ಲಕ್ಷ ಹಣದೊಂದಿಗೆ ಕಾರು ಸಮೇತ ಪರಾರಿಯಾಗಿದ್ದ.

ಈ ಬಗ್ಗೆ ನಿವೃತ್ತ ಎಸ್ಪಿ ಗುರುಪ್ರಸಾದ್ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಚ್ಚೆತ್ತ ಪೊಲೀಸರ ತಂಡ ಕಳ್ಳನ ಪತ್ತೆಗೆ ಬಲೆ ಬೀಸಿದ್ದರು. ಆರೋಪಿ ರಮೇಶ್ ಮೂಲತಃ ಆಂಧ್ರದ ಹಿಂದೂಪುರ ಮೂಲದವನಾದ ಹಿನ್ನೆಲೆ ಆಂಧ್ರದತ್ತ ಪ್ರಯಾಣ ಬೆಳೆಸಿ ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿದ್ದರು. ಆಂಧ್ರದ ಬಳಿ ರಮೇಶ್ ಕಾರು ಮರಕ್ಕೆ ಡಿಕ್ಕಿಯಾಗಿತ್ತು. ಕೂಡಲೇ ಆರೋಪಿಯನ್ನು ಸೆರೆಹಿಡಿದ ಪೊಲೀಸರು 97 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *