ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್ ತನ್ನ ಬರ್ತ್ ಡೇ ದಿನವೇ ಸಾವನ್ನಪ್ಪಿದ್ದಾನೆ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
