Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವೃಷಭಾವತಿ ನದಿಯಲ್ಲಿ ನಗರದ ಕಸದ ಪ್ರವಾಹ! – ಚಿಕ್ಕಕುಂಟನಹಳ್ಳಿ ಜನರ ಆಕ್ರೋಶ

Spread the love

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿಯಿಂದ ಬೆಳಗಿನವರೆಗೆ ಸುರಿದ ಭಾರೀ ಮಳೆಯಿಂದ ವೃಷಭಾವತಿ ನದಿ ತುಂಬಿ ಹರಿಯುತ್ತಿದೆ. ಆದರೆ, ಈ ನದಿಯಲ್ಲಿ ಬೆಂಗಳೂರು ನಗರದ ಕೊಳಚೆ ನೀರು ಮತ್ತು ರಾಶಿರಾಶಿ ಕಸ ಹರಿದುಬರುತ್ತಿರುವುದು ಬಿಡದಿ ಹೋಬಳಿಯ ಚಿಕ್ಕಕುಂಟನಹಳ್ಳಿ ಗ್ರಾಮಸ್ಥರಿಗೆ ತೀವ್ರ ಕಿರಿಕಿರಿಯನ್ನುಂಟು ಮಾಡಿದೆ.
ಗ್ರಾಮದ ಸೇತುವೆ ಬಳಿ ಲೋಡ್ ಗಟ್ಟಲೆ ಕಸ ಸಂಗ್ರಹವಾಗಿದ್ದು, ನದಿಗೆ ಅಡ್ಡಲಾಗಿ ಕಸ ತಡೆಯೊಡ್ಡಿರುವ ಕಾರಣ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ ಇದೆ. ಇದರಿಂದ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನದಿ ಪಕ್ಕದಲ್ಲಿರುವ ಮನೆಗಳಿಗೆ ಕೊಳಚೆ ನೀರು ಮತ್ತು ಕಸದ ರಾಶಿ ತೊಂದರೆಯನ್ನುಂಟು ಮಾಡಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ವೃಷಭಾವತಿ ಸ್ವಚ್ಛತೆಗೆ ಗ್ರಾಮಸ್ಥರು ಮನವಿ:

ವೃಷಭಾವತಿ ನದಿಯ ಸ್ವಚ್ಛತೆಗೆ ಒತ್ತಾಯಿಸಿರುವ ಚಿಕ್ಕಕುಂಟನಹಳ್ಳಿ ಗ್ರಾಮಸ್ಥರು, ನದಿಯಲ್ಲಿ ಸಂಗ್ರಹವಾದ ಕಸವನ್ನು ತಕ್ಷಣ ತೆರವುಗೊಳಿಸಿ, ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಡುವಂತೆ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ‘ನಗರದ ಕಸ ಮತ್ತು ಕೊಳಚೆ ನೀರು ನಮ್ಮ ಗ್ರಾಮಕ್ಕೆ ತೊಂದರೆಯಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಾಣಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಸ್ತುತ, ಸ್ಥಳೀಯ ಆಡಳಿತದಿಂದ ಯಾವುದೇ ಕ್ರಮಕ್ಕೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಮುಂದಿನ ವರದಿಗಳಿಗೆ ಸಂಪರ್ಕದಲ್ಲಿರಿ.


Spread the love
Share:

administrator

Leave a Reply

Your email address will not be published. Required fields are marked *