Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ಆಪರೇಷನ್ ಸಿಂಧೂರ್’ ಕುರಿತು ಅವಹೇಳನಕಾರಿ ಹೇಳಿಕೆ: ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

Spread the love

ಪುಣೆ: ‘ಆಪರೇಷನ್‌ ಸಿಂಧೂರ’ ಕುರಿತ ಪೋಸ್ಟ್‌ಗೆ ಪ್ರತಿಕ್ರಿಯಿಸುವಾಗ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಪುಣೆ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶರ್ಮಿಷ್ಠ ಪನೋಲಿ ಎಂಬಾಕೆಯನ್ನು ಶುಕ್ರವಾರ ರಾತ್ರಿ ಗುರುಗ್ರಾಮ್‌ನಿಂದ ಕೋಲ್ಕತ್ತಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಧರ್ಮವನ್ನು ಗುರಿಯಾಗಿಸಿ ಅವಹೇಳನಕಾರಿ ಹೇಳಿಕೆಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು.ಈ ವಿಡಿಯೋ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಕೋಲ್ಕತ್ತಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಕೆಯ ಬಂಧನದ ನಂತರ, ಪನೋಲಿಯನ್ನು ಶನಿವಾರ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈ ಪ್ರಕರಣವು ಶರ್ಮಿಷ್ಠ ಪನೋಲಿ ಎಂಬಾಕೆಯ ಇನ್‌ಸ್ಟಾಗ್ರಾಮ್ ವೀಡಿಯೊಗೆ ಸಂಬಂಧಿಸಿದೆ. ಅದು ನಿರ್ದಿಷ್ಟ ಸಮುದಾಯದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧನ ಭೀತಿಯಿಂದ ಪನೋಲಿ ಮತ್ತು ಆಕೆಯ ಕುಟುಂಬಸ್ಥರು ಪರಾರಿಯಾಗಿದ್ದರು. ಹಲವು ಬಾರಿ ನೋಟಿಸ್‌ ಜಾರಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಕೊನೆಗೆ ನ್ಯಾಯಾಲಯ ಬಂಧನ ವಾರೆಂಟ್‌ ಹೊರಡಿಸಿತು. ಅದರ ಆಧಾರದ ಮೇಲೆ ಗುರುಗ್ರಾಮ್‌ನಲ್ಲಿ ಆಕೆಯನ್ನು ಬಂಧಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿವಾದದಿಂದಾಗಿ ಪನೋಲಿ ಸಾಮಾಜಿಕ ಮಾಧ್ಯಮದಲ್ಲಿ ಬೇಷರತ್ತಾಗಿ ಕ್ಷಮೆಯಾಚಿಸಿದ್ದಾಳೆ. ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಅಳಿಸಿಹಾಕಿದ್ದಾಳೆ.


Spread the love
Share:

administrator

Leave a Reply

Your email address will not be published. Required fields are marked *