Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿವಮೊಗ್ಗ ದಸರಾ ಸಂಭ್ರಮಕ್ಕೆ ಕೌಂಟ್‌ಡೌನ್: ತಾಲೀಮು ಆರಂಭಿಸಿದ ಗಜಪಡೆ, ವಿಡಿಯೋ ವೈರಲ್

Spread the love

ಶಿವಮೊಗ್ಗ: ನಗರದಲ್ಲಿ ಸಂಭ್ರಮದ ದಸರಾ ಆಚರಣೆ ನಡೆಯುತ್ತಿದ್ದು, ಜಂಬೂಸವಾರಿಯಲ್ಲಿ ಭಾಗವಹಿಸಲು ಸಕ್ರೆಬೈಲಿನಿಂದ ಗಜಪಡೆ ಆಗಮಿಸಿದೆ.

ಮೂರು ಆನೆಗಳು ಶಿವಮೊಗ್ಗಕ್ಕೆ ಆಗಮಿಸಿದ್ದು, ಗಜಪಡೆಗೆ ಶಾಸಕ ಎಸ್.ಎನ್ ಚನ್ನಬಸಪ್ಪ ಹಾಗೂ ಆಯುಕ್ತ ಮಾಯಣ್ಣಗೌಡ ಆರತಿ ಎತ್ತಿ ಸ್ವಾಗತ ಕೋರಿದ್ದಾರೆ. ನಗರದ ವಾಸವಿ ಶಾಲೆ ಆವರಣದಲ್ಲಿ ಆನೆಗಳಿಗೆ ತಂಗಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದ 2ನೇ ದೊಡ್ಡ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ ಚಾಲನೆ

ಶಿವಮೊಗ್ಗ ನಗರದಲ್ಲಿ ಗಜಪಡೆ ತಾಲೀಮು ಆರಂಭಿಸಿವೆ. ದಸರಾದ ಕೊನೆಯ ದಿನ ಅದ್ದೂರಿ ಜಂಬೂಸವಾರಿ ನಡೆಯಲಿದೆ. ಈ ಭಾರಿಯೂ ಸಾಗರ್ ಆನೆ ಅಂಬಾರಿ ಹೋರಲಿದೆ. ಸಾಗರ್‍ಗೆ ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ಸಾಥ್ ನೀಡಲಿವೆ. 650 ಕೆಜಿ ಬೆಳ್ಳಿಯ ಅಂಬಾರಿಯಲ್ಲಿ ನಾಡದೇವಿ ಚಾಮುಂಡಿಯನ್ನು ಕೂರಿಸಿ ಮೆರವಣಿಗೆ ಮಾಡಲಾಗುತ್ತದೆ.

ರಾಜ್ಯದಲ್ಲಿ ಎರಡನೇ ಅತಿದೊಡ್ಡ ದಸರಾ ಎಂಬ ಖ್ಯಾತಿ ಶಿವಮೊಗ್ಗ ದಸರಾಕ್ಕೆ ಇದೆ. ಈ ಭಾರಿ ದಸರಾ ಜಂಬೂ ಸವಾರಿ ನೋಡಲು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ. ಇದನ್ನೂ ಓದಿ: ಶಿವಮೊಗ್ಗ ದಸರಾ | ಗಜಪಡೆಗೆ ಆಹ್ವಾನ – ಈ ಬಾರಿ 10 ದಿನಗಳ ಕಾಲ ಸಂಭ್ರಮದ ಉತ್ಸವ


Spread the love
Share:

administrator

Leave a Reply

Your email address will not be published. Required fields are marked *