ಬಳ್ಳಾರಿಯಲ್ಲಿ ಕ್ರಿಪ್ಟೊಕರೆನ್ಸಿ ವಂಚನೆ: ಉದ್ಯಮಿಗೆ ₹29 ಲಕ್ಷ ಪಂಗನಾಮ

ಬಳ್ಳಾರಿ: ಕ್ರಿಪ್ಟೊಕರೆನ್ಸಿಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ನಗರದ ಉದ್ದಿಮೆದಾರರೊಬ್ಬರಿಗೆ ₹29 ಲಕ್ಷ ವಂಚಿಸಲಾಗಿದೆ.

ಈ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಗೆ 2021ರಲ್ಲಿ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿದ್ದ ಭಾಸ್ಕರ್ ರಾವ್ ಮತ್ತು ತ್ರಿವಿಕ್ರಮ ರಾವ್ ಎಂಬ ಇಬ್ಬರು, ಕ್ರಿಪ್ಟೊಕರೆನ್ಸಿ ಬಗ್ಗೆ ಮಾಹಿತಿ ನೀಡಿ, ಹೂಡಿಕೆ ಮಾಡುವಂತೆ ಸಲಹೆ ನೀಡಿದ್ದರು.
ಅಧಿಕ ಲಾಭಾಂಶದ ಆಸೆ ತೋರಿಸಿದ್ದರು. ಇದನ್ನು ನಂಬಿದ ದೂರುದಾರರು ಹಂತ ಹಂತವಾಗಿ ₹29,78,648 ಹಣವನ್ನು ಬ್ಯಾಂಕ್ ಖಾತೆ ಮೂಲಕ ಆರೋಪಿಗಳಿಗೆ ವರ್ಗಾಯಿಸಿದ್ದಾರೆ. ತಾವು ಮೋಸ ಹೋಗಿರುವುದು ತಿಳಿದ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.