Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗೆ ತಡೆ:ಹೊಸ ಕಾನೂನು ಜಾರಿ

Spread the love

ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿದ್ದು ಸಾಬೀತಾದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಲು ಅವಕಾಶ ನೀಡುವ ಕಾನೂನು ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

‘ಕರ್ನಾಟಕ ತಪ್ಪುಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ’ಯು ಸಿದ್ದವಾಗಿದ್ದು, ಗುರುವಾರ (ಜೂನ್‌ 19) ನಡೆದ ಸಚಿವ ಸಂಪುಟ ಸಭೆಯ ಮುಂದೆ ಅದನ್ನು ಮಂಡಿಸಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುವ ಸುಳ್ಳು ಸುದ್ದಿಗಳಿಗೆ ಸಂಪೂರ್ಣ ಕಡಿವಾಣ ಹಾಕುವಂತಹ ಹಲವು ಅಧಿಕಾರಗಳನ್ನು ಈ ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ’ ಎಂದು ಮೂಲಗಳು ಹೇಳಿವೆ.

ನಾಡಿನ ಜನರಿಗೆ ತಲುಪುವಂತೆ ರಾಜ್ಯದೊಳಗಿರುವ ಮತ್ತು ಹೊರ ರಾಜ್ಯದ ವ್ಯಕ್ತಿ, ಸುಳ್ಳು ಸುದ್ದಿಗಳನ್ನು ಹಂಚಿಕೊಂಡರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ. ಸಾರ್ವಜನಿಕ ಭದ್ರತೆ, ಸಾಮರಸ್ಯಕ್ಕೆ ಧಕ್ಕೆ ತರುವ, ಮುಕ್ತ ಮತ್ತು ಸ್ವತಂತ್ರ ರೀತಿಯಲ್ಲಿ ಚುನಾವಣೆ ನಡೆಸುವುದಕ್ಕೆ ಅಡ್ಡಿಪಡಿಸುವಂತಹ ಪೋಸ್ಟ್‌ ಮಾಡಿದವರಿಗೂ ಶಿಕ್ಷೆ ವಿಧಿಸಬಹುದಾಗಿದೆ ಎಂದು ಮಸೂದೆಯಲ್ಲಿ ವಿವರಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪಿಸಲು, ಕನ್ನಡ ಮತ್ತು ಸಂಸ್ಕೃತಿ ಸಚಿವರ ನೇತೃತ್ವದಲ್ಲಿ ಆರು ಸದಸ್ಯರ ಸಮಿತಿ ರಚಿಸಲು, ಸುಳ್ಳು ಸುದ್ದಿಗಳ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮಸೂದೆ ಅವಕಾಶ ಮಾಡಿಕೊಡಲಿದೆ.


Spread the love
Share:

administrator

Leave a Reply

Your email address will not be published. Required fields are marked *