Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದರ್ಶನ್ ಜಾಮೀನು ಪ್ರಶ್ನೆ: ಸುಪ್ರೀಂನಲ್ಲಿ ಗುರುವಾರ ನಿರ್ಣಾಯಕ ದಿನ

Spread the love

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರ ಬಂದರು. ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ ಅರ್ಜಿ ವಿಚಾರಣೆ ಇಂದು (ಜುಲೈ 22) ನಡೆಯಬೇಕಿತ್ತು. ಆದರೆ, ಈಗ ಅರ್ಜಿ ವಿಚಾರಣೆ ಗುರುವಾಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ದರ್ಶನ್​ಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತೆ ಆಗಿದೆ.

‘ದರ್ಶನ್ ಪರ ಕಪಿಲ್​ ಸಿಬಲ್ ವಾದ ಮಂಡಿಸಬೇಕಿತ್ತು.. ಆದರೆ, ಅವರಿಗೆ ಬೇರೆ ಪ್ರಕರಣದಲ್ಲಿ ಇಂದು ವಾದ ಮಂಡಿಸಬೇಕಿದೆ. ನಿನ್ನೆ ರಾತ್ರಿ ನನಗೆ ಈ ಕೇಸ್ ಬಂತು. ಆದರೆ, ಇಷ್ಟು ಬೇಗ ಕೇಸ್​ನ ವಾದ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಒಂದು ಒಂದು ದಿನ ಸಮಯ ಕೇಳಿದ್ದೇನೆ. ಇದಕ್ಕೆ ಸುಪ್ರೀಂಕೋರ್ಟ್ ಸಮ್ಮತಿ ಕೊಟ್ಟಿದೆ. ಹೀಗಾಗಿ, ಈ ಅರ್ಜಿ ವಿಚಾರಣೆ ಗುರುವಾರಕ್ಕೆ (ಜುಲೈ 24) ಮುಂದೂಡಲ್ಪಟ್ಟಿದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಸಿದ್ದಾರ್ಥ್ ದವೆ ಹೇಳಿಕೆ ನೀಡಿದ್ದಾರೆ.

‘ನಾನು ಬಂಧನದ ಕಾರಣಗಳ ಬಗ್ಗೆ ವಾದ ಮಂಡಿಸುವುದಿಲ್ಲ. ಕೇಸ್​ನ ಮೆರಿಟ್ಸ್ ಮೇಲೆ ವಾದ ಮಂಡಿಸುತ್ತೇನೆ’ ಎಂದು ಕೂಡ ಅವರು ಹೇಳಿದ್ದಾರೆ. ಹೀಗಾಗಿ, ದರ್ಶನ್ ಕೇಸ್​ನಲ್ಲಿ ಗುರುವಾರ ತೀರ್ಪು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎಲ್ಲಾ 17 ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪೈಕಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರಿದೆ.  ಈ ಪ್ರಕರಣದಲ್ಲಿ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸುಪ್ರೀಂಕೋರ್ಟ್ ಅಭಿಪ್ರಾಯ ಏನು?

‘ದರ್ಶನ್ ಜಾಮೀನು ಅರ್ಜಿಯನ್ನು ಏಕೆ ರದ್ದು ಮಾಡಬಾರದು’ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ದರ್ಶನ್ ಪರ ವಕೀಲರ ಬಳಿ ಕೇಳಿತ್ತು. ಅಲ್ಲದೆ, ದರ್ಶನ್​ಗೆ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದು ಕೂಡ ಹೇಳಿತ್ತು. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಲಿದೆ. ಅವರ ‘ಡೆವಿಲ್’ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಲ್ಲಲಿವೆ.


Spread the love
Share:

administrator

Leave a Reply

Your email address will not be published. Required fields are marked *