Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಮಾನ ಅಪಘಾತದಲ್ಲಿ ಎಲ್ಲವೂ ಸುಟ್ಟು ಕರಕಲಾದರೂ ಭಗವದ್ಗೀತೆಗೆ ಏನು ಆಗಿಲ್ಲ

Spread the love

ಅಹ್ಮದಾಬಾದ್‌ :ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಗುರುವಾರ ಪತನಗೊಂಡಿದೆ. ಈ ದುರಂತಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ವಿಮಾನ ದುರಂತ ನಡೆದ ಸ್ಥಳಕ್ಕೆ ಸಂಬಂಧಪಟ್ಟ ದೃಶ್ಯ ಎನ್ನಲಾಗುತ್ತಿರುವ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಅಪಘಾತದಲ್ಲಿ ಎಲ್ಲವೂ ಸುಟ್ಟುಕರಕಲಾದರೂ, ಆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಪತ್ತೆಯಾಗಿದೆ. ಈ ದೃಶ್ಯವನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

ಸುಮಾರು 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ (Plane Crash) ಆಘಾತಕಾರಿ ಘಟನೆ ಗುರುವಾರ ಸಂಭವಿಸಿದೆ. ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ದುರಂತದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸೇರಿದಂತೆ ಒಟ್ಟು 246 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇನ್ನೂ ಈ ಅಪಘಾತ ಸಂಭವಿಸಿದ ಸ್ಥಳದಲ್ಲಿನ  ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು (Bhagavad gita) ಸಿಕ್ಕಿದ್ದು, ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆಯ ಪುಸ್ತಕ ಮಾತ್ರ ಏನು ಆಗಯೇ ಇದ್ದಿದ್ದನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

ಅವಶೇಷಗಳ ಅಡಿಯಲ್ಲಿ ಪತ್ತೆಯಾದ ಭಗವದ್ಗೀತೆ:

ವಿಮಾನ ಪತನವಾದ ಸ್ಥಳಕ್ಕೆ ಸಂಬಂಧಪಟ್ಟ ದೃಶ್ಯವೆಂದು ಹೇಳಲಾಗುತ್ತಿರುವ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡು ಎಲ್ಲವೂ ಸುಟ್ಟು ಕರಕಲಾದರೂ ಅಲ್ಲಿದ್ದ ಭಗವದ್ಗೀತೆಯೊಂದು ಹಾಗೆಯೇ ಇತ್ತು. ಸುಟ್ಟುಕರಕಲಾದ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆ ಸುರಕ್ಷಿತವಾಗಿ ಪತ್ತೆಯಾಗಿದ್ದು,  ಇದರ ಸತ್ಯಾಸತ್ಯತೆಯ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.


Spread the love
Share:

administrator

Leave a Reply

Your email address will not be published. Required fields are marked *