Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಲ್ ವಿಚಾರಕ್ಕೆ ಜಗಳ – ಬಿಯರ್ ಬಾಟಲ್‌ನಿಂದ ಶಿಕ್ಷಕನಿಗೆ ಇರಿತ, ಆರೋಪಿ ಯುವಕ ಬಂಧನ

Spread the love

ಬಾಗಲಕೋಟೆ: ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್​ ಬಾಟಲ್​ನಿಂದ ಶಿಕ್ಷಕನಿಗೆ ಇರಿದ ಘಟನೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ರಾಮಪ್ಪ ಪೂಜಾರಿ (36) ಎಂಬುವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪವನ್ ಜಾಧವ್ (21) ಬಾಟಲ್​ನಿಂದ ಇರಿದಿರುವ ಯುವಕ.

ಬಿಎಲ್​ಡಿಇ ಖಾಸಗಿ ಸಂಸ್ಥೆಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ರಾಮಪ್ಪ ಪೂಜಾರಿ ಮತ್ತು ಪವನ್ ಜಾಧವ್ ಅಕಪಕ್ಕದ ಮನೆಯವರು. ಕ್ರಿಕೆಟ್ ಆಡುವಾಗ ಬಾಲ್ ಶಿಕ್ಷಕ ರಾಮಪ್ಪ ಪೂಜಾರಿ ಮನೆ‌ಯಲ್ಲಿ ಬಿದ್ದಿತ್ತು. ನಿಮ್ಮ ಮನೆಯಲ್ಲಿ ಬಾಲ್ ಹೋಗಿದೆ ಕೊಡಿ ಎಂದು ಆರೋಪಿ ಪವನ್​ ಜಾಧವ್​, ರಾಮಪ್ಪ ಪೂಜಾರಿಯವರಿಗೆ ಕೇಳಿದ್ದಾರೆ. ಅದಕ್ಕೆ, ರಾಮಪ್ಪ ಪೂಜಾರಿ ಇಲ್ಲಿ ಬಾಲ್ ಬಂದಿಲ್ಲ ಎಂದಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಕಿರಿಕ್ ಆಗಿದೆ.

ನಂತರ ಶಾಲೆಗೆ ಬಂದ ಪವನ್​ ಸ್ಟಾಫ್​ ರೂಂ ಒಳಗೆ ನುಗ್ಗಿ ಬಿಯರ್​ ಬಾಟಲ್​ನಿಂದ ಶಿಕ್ಷಕ ರಾಮಪ್ಪ ಪೂಜಾರಿಗೆ ಇರಿದಿದ್ದಾನೆ. ಇದರಿಂದ ಗಾಯಗೊಂಡ ರಾಮಪ್ಪ ಪೂಜಾರಿಯವರನ್ನು ಸಾವಳಗಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಳಗಿ ಠಾಣೆ ಪೊಲೀಸರು ಪವನ್​ ಜಾದವ್​ನನ್ನು ಬಂಧಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *