ಅಯೋಧ್ಯೆ ರಾಮಮಂದಿರದಲ್ಲಿ 2ನೇ ಪ್ರಾಣ ಪ್ರತಿಷ್ಠೆಗೆ ಸಜ್ಜು –ಬಂಗಾರದ ಶಿಖರ ಉದ್ಘಾಟನೆ

ಲಕ್ನೋ: ಅಯೋಧ್ಯೆಯ ರಾಮಮಂದಿರ ಮತ್ತೊಂದು ಕ್ಷಣಕ್ಕೆ ಸಜ್ಜಾಗಿದೆ. 2ನೇ ಬಾರಿ ಪ್ರಾಣ ಪ್ರತಿಷ್ಠೆಗೆ ಮುನ್ನ ಬಂಗಾರದ ಗುಮ್ಮಟ ಉದ್ಘಾಟನೆ ಆಗಲಿದೆ.
ಗರ್ಭಗುಡಿಯ ಮೇಲೆ ಇರುವ ಬಂಗಾರದ ಶಿಖರವು ಪಾವಿತ್ರ್ಯತೆ, ಪ್ರಗತಿ ಮತ್ತು ಭಕ್ತಿಯ ಸಂಕೇತವಾಗಿದೆ. ಕಿಮೀಗಳ ದೂರಕ್ಕೆ ಗೋಚರಿಸ್ತಿರುವ ಈ ನಯನಮನೋಹರ ಗುಮ್ಮಟವು ಭಕ್ತರ ಕಣ್ಮನ ತಣಿಸುತ್ತಿದೆ. ಭಕ್ತಿ-ಭಾವವನ್ನು ಇಮ್ಮಡಿಗೊಳಿಸುತ್ತಿದೆ.
ಅಲ್ಲದೇ ಮಂಗಳವಾರದಿಂದ 3 ದಿನ 2ನೇ ಬಾರಿಗೆ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಜೊತೆಗೆ ಮೊದಲ ಮಹಡಿಯಲ್ಲಿ ಇತರೆ ದೇವರ ಮೂರ್ತಿಗಳ ಪ್ರತಿಷ್ಠಾಪನೆ ಆಗಲಿದೆ. ಜೊತೆಗೆ ʻರಾಮ ದರ್ಬಾರ್ʼ ಕೂಡ ನಡೆಯಲಿದೆ.ಈಗಾಗಲೇ ಸಾವಿರಾರು ಭಕ್ತರು ಅಯೋಧ್ಯೆಯತ್ತ ಮುಖಮಾಡಿದ್ದಾರೆ. ಈ ಮಧ್ಯೆ, ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ತಂದೆ ಎಲಾನ್ ಮಸ್ಕ್ ಭಾರತಕ್ಕೆ ಬಂದಿದ್ದು, ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ.