Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಜಯಪುರದಲ್ಲಿ ಡಬಲ್ ಮರ್ಡರ್ ಕೇಸ್: ಹತ್ಯೆ ಆರೋಪಿ ಅಕ್ಷಯ್ ಜುಲಜುಲೆ ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆ; ಕಾಲಿಗೇ ಗುಂಡು ಹಾರಿಸಿ ಸೆರೆ!

Spread the love

ವಿಜಯಪುರ: ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಅಕ್ಷಯ್ ಜುಲಜುಲೆ ಬಂಧಿತ ಆರೋಪಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಭಾನುವಾರ (ಅ.12) ರಾತ್ರಿ ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬ ಇಬ್ಬರ ಹತ್ಯೆ ನಡೆದಿತ್ತು. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು 5 ಜನ ಆರೋಪಿಗಳನ್ನ ಸೆರೆಹಿಡಿಯಲು ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.

ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸದ್ಯ ಆರೋಪಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೂ 2023ರಲ್ಲಿ ಈರಣ್ಣಗೌಡ ಎಂಬಾತನ ಮೇಲೆ ಈಗ ಮೃತ ಸಾಗರ್ ಹಾಗೂ ಇಸಾಕ್ ಟೈಲ್ಸ್‌ನಿಂದ ಹಲ್ಲೆ ನಡೆಸಿದ್ದರು. ಈರಣ್ಣಗೌಡ 8 ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ನಂತರ ಮೃತಪಟ್ಟಿದ್ದ. ಇದೇ ದ್ವೇಷದಿಂದಲೇ ಸದ್ಯ ಅಕ್ಷಯ್ ಹಾಗೂ ಈರಣ್ಣಗೌಡ ಮಕ್ಕಳು ಸೇರಿ ಸಾಗರ್, ಇಸಾಕ್‌ನ್ನು ಹತ್ಯೆ ಮಾಡಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *