ಧಾರಾಕಾರ ಮಳೆಯಿಂದಾಗಿ ಹರಿಯುವ ನದಿಯಂತಾದ ಬನ್ನೇರುಘಟ್ಟ ರಸ್ತೆ

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಇಡೀ ರಸ್ತೆ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಆಸ್ಪತ್ರೆಗಳು, ಟೆಕ್ ಪಾರ್ಕ್ಗಳು ಮತ್ತು ಮಾಲ್ಗಳೊಂದಿಗೆ ನಗರ ಬೆಳವಣಿಗೆಯ ಸಂಕೇತವೆಂದು ಬಿಂಬಿಸಲ್ಪಡುವ ಬನ್ನೇರುಘಟ್ಟ ರಸ್ತೆಯನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇಷ್ಟು ಹದಗೆಟ್ಟ ಸ್ಥಿತಿ ನಿರ್ಮಾಣವಾಗಿದ್ದರೂ ಅಧಿಕಾರಿಗಳಿಗೆ ಇದರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದಾಗಿದೆ ಎಂದು ಕರ್ನಾಟಕ ಪೋರ್ಟ್ಫೋಲಿಯೋ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
