Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿದ್ದಾರ್ಥ ಮೆಡಿಕಲ್ ಮತ್ತು ಎಸ್ಎಸ್ಐಟಿ ಮೇಲೆ ಇಡಿ ದಾಳಿ: ಮುಂದುವರಿದ ದಾಖಲೆ ಪರಿಶೀಲನೆ

Spread the love

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಸದ್ಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್​​ಪಿ ತಾಕೀತು ಮಾಡಿದ್ದಾರೆ. ಅಲ್ಲದೆ, ಡಿವೈಎಸ್​ಪಿ ನೇತೃತ್ವದಲ್ಲಿ ಕಾಲೇಜಿಗೆ ಭದ್ರತೆ ಒದಗಿಸಲಾಗಿದೆ.

ರನ್ಯಾ ರಾವ್, ಸಿದ್ದಾರ್ಥ ಕಾಲೇಜಿನ ನಡುವೆ ಹಣ ವರ್ಗಾವಣೆ ಶಂಕೆ

ಚಿನ್ನ ಅಕ್ರಮ ಸಾಗಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಹಾಗೂ ಸಿದ್ದಾರ್ಥ ಕಾಲೇಜಿನ ನಡುವೆ ಹಣ ವರ್ಗಾವಣೆ ಶಂಕೆಯ ಕಾರಣ ಇಡಿ ದಾಳಿ ನಡೆದಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

2019ರಲ್ಲಿ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವೈದ್ಯಕೀಯ ಸೀಟು ಅಕ್ರಮ ಹಂಚಿಕೆ ಆರೋಪ ಸಂಬಂಧ ಐಟಿ ದಾಳಿ ನಡೆದಿತ್ತು. ಆ ಸಂದರ್ಭದಲ್ಲೇ ಪರಮೇಶ್ವರ್ ಆಪ್ತ ಆತ್ಮಹತ್ಯೆಗೆ ಶರಣಾಗಿದ್ದ. ಅದಾದ ನಂತರ ದಾಳಿ ಪ್ರಕ್ರಿಯೆ ನಿಲ್ಲಿಸಲಾಗಿತ್ತು. 2019ರ ದಾಳಿ ಬಳಿಕ ಐಟಿ ಅಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದ್ದರು.

2019ರ ಐಟಿ ದಾಳಿ ಸಂದರ್ಭದಲ್ಲಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಬೆಳವಣಿಗೆಯ ನಂತರ ಅವರು ಬೆಂಗಳೂರಿನ ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಚಾರ ಕರ್ನಾಟಕ ರಾಜಕೀಯದಲ್ಲಿಯೂ ತೀವ್ರ ಕೋಲಾಹಲಕ್ಕೆ ಕಾರಣವಾಗಿತ್ತು. ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎಂಬ ದೂರುಗಳು ಕೇಳಿಬಂದಿವೆ ಎಂದು ಅಂದಿನ ವಿರೋಧ ಪಕ್ಷದ ನಾಯಕ, ಈಗಿನ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದರು.


Spread the love
Share:

administrator

Leave a Reply

Your email address will not be published. Required fields are marked *