Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಾಕ್ ಐಎಸ್‌ಐಗೆ ಬೇಹುಗಾರಿಕೆ: ಹನಿಟ್ರ್ಯಾಪ್‌ಗೆ ಬಲಿಯಾಗಿ ರಾಷ್ಟ್ರೀಯ ಭದ್ರತಾ ಮಾಹಿತಿ ಸೋರಿಕೆ ಮಾಡಿದ ಆರೋಪಿ ರಾಜಸ್ಥಾನದಲ್ಲಿ ಬಂಧನ

Spread the love

ಜೈಪುರ್: ಪಾಕಿಸ್ತಾನದ (Pakistan) ಐಎಸ್‌ಐ (Inter Services Intelligence) ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ (Rajasthan) ಗುಪ್ತಚರ ಇಲಾಖೆ ಅಧಿಕಾರಿಗಳು ಅಲ್ವಾರ್‌ನ ಗೋವಿಂದಗಢ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗತ್ ಸಿಂಗ್ (32) ಎಂದು ಗುರುತಿಸಲಾಗಿದೆ. ಅಲ್ವಾರ್‌ನ ಕಂಟೋನ್ಮೆಂಟ್ ಪ್ರದೇಶದ ಕಣ್ಗಾವಲು ಸಮಯದಲ್ಲಿ ಮಂಗತ್ ಸಿಂಗ್ ಬೇಹುಗಾರಿಕೆಯಲ್ಲಿ ತೊಡಗಿರುವುದು ಗೊತ್ತಾಗಿತ್ತು. ಬಳಿಕ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಆರೋಪಿ ಪಾಕ್‌ ಸಂಪರ್ಕದಲ್ಲಿರುವುದು ತಿಳಿದು ಬಂದಿದೆ. 1923ರ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 

ತನಿಖೆಯ ಸಮಯದಲ್ಲಿ ಇಶಾ ಶರ್ಮಾ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಾಕಿಸ್ತಾನದ ಮಹಿಳಾ ಹ್ಯಾಂಡ್ಲರ್, ಆರೋಪಿಯನ್ನು ಹನಿಟ್ರ್ಯಾಪ್ ಮಾಡಿದ್ದಳು ಎಂದು ತಿಳಿದುಬಂದಿದೆ. ಬೇಹುಗಾರಿಕೆ ಚಟುವಟಿಕೆಗಳಲ್ಲಿ ಸಹಕರಿಸಿದ್ದಕ್ಕಾಗಿ ಪಾಕ್ ಹ್ಯಾಂಡ್ಲರ್ ಸಿಂಗ್‌ಗೆ ಹಣಕಾಸಿನ ನೆರವು ನೀಡಿದ್ದಳು ಎಂಬುದು ತಿಳಿದು ಬಂದಿದೆ.

ಹಣಕ್ಕಾಗಿ ಆರೋಪಿ ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ನೀಡಿದ್ದಾನೆ. ಈತ ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಅಕ್ಟೋಬರ್ 10 ರಂದು, ಮತ್ತೊಬ್ಬ ಶಂಕಿತ ಗೂಢಚಾರಿ ಮಹೇಂದ್ರ ಪ್ರಸಾದ್‌ನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿತ್ತು. ಆತ ಡಿಆರ್‌ಡಿಒ ಅತಿಥಿಗೃಹದ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದಾಗ ಸೂಕ್ಷ್ಮ ರಕ್ಷಣಾ ಸಂಬಂಧಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಜೈಸಲ್ಮೇರ್‌ನ ಹನೀಫ್ ಖಾನ್ ಎಂಬಾತನನ್ನು ಇದೇ ಆರೋಪದ ಮೇಲೆ ಕಳೆದ ವಾರ ಬಂಧಿಸಲಾಗಿತ್ತು.

ರಾಜಸ್ಥಾನ ಪೊಲೀಸರು, ವಿಶೇಷವಾಗಿ ಸಿಐಡಿ ಗುಪ್ತಚರ ಘಟಕ ಇಂತಹ ಬೇಹುಗಾರಿಕೆ ಚಟುವಟಿಕೆಗಳನ್ನು ಪತ್ತೆಹಚ್ಚಲು ತೀವ್ರ ನಿಗವಹಿಸಿದೆ.


Spread the love
Share:

administrator

Leave a Reply

Your email address will not be published. Required fields are marked *