Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇವಿಎಂ ಸಮೀಕ್ಷೆ ಒಂದು ‘ರಾಜಕೀಯ ಕುತಂತ್ರ’: ಸಮೀಕ್ಷೆ ನಡೆಸಿದ ಎನ್‌ಜಿಒ ವಿಶ್ವಾಸಾರ್ಹತೆ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ!

Spread the love

ಬೆಂಗಳೂರು: EVM ಸಮೀಕ್ಷೆಯನ್ನ ಡಾ.ಆರ್ ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಅವರು 2024ರಲ್ಲಿ ಮೋದಿ ಬಗ್ಗೆ ಬರೆದಿರುವ ಪುಸ್ತಕ ನೋಡಿದ್ರೆ ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆ ಆಧರಿಸಿ ವರದಿ ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಿಡಿ ಕಾರಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಎಂ ಇವಿಎಂ (Electronic Voting Machines) ಸಮೀಕ್ಷೆ ವಿರುದ್ಧ ಕಿಡಿ ಕಾಡಿದ್ದಾರೆ. ಚುನಾವಣಾ ಆಯೋಗದ ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಎಕ್ಸ್‌ನಲ್ಲಿ ಏನಿದೆ?
ಚುನಾವಣಾ ಆಯೋಗದ (Election Commission) ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್‌ ಗಾಂಧಿ (Rahul Gandhi) ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಸುಳ್ಳು ಕಥನದ ವಿಶ್ವಾಸಾರ್ಹತೆಯನ್ನು ತುಸು ಆಳಕ್ಕೆ ಇಳಿದು ಪರಿಶೀಲಿಸಿದರೆ ಇದರ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ.

ಮೊದಲನೆಯದಾಗಿ, ಈ ತಥಾಕಥಿತ ಸಮೀಕ್ಷೆ ರಾಜ್ಯ ಚುನಾವಣಾ ಆಯೋಗವು ಮೇ 2025ರಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆಸಿದ ಸಿಸ್ಟಮ್ಯಾಟಿಕ್ ವೋಟರ್ಸ್‌ ಎಜುಕೇಷನ್ ಆ್ಯಂಡ್ ಎಲೆಕ್ಟೋರಲ್‌ ಪಾರ್ಟಿಸಿಪೇಷನ್‌ (ಸ್ವೀಪ್‌ – SWEEP) ಕಾರ್ಯಕ್ರಮದ ಒಂದು ಭಾಗವಾಗಿದೆ. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತೇ ಹೊರತು ಇದು ರಾಹುಲ್ ಗಾಂಧಿ ಅವರು ಆರೋಪಿಸಿರುವ ಮತಗಳ್ಳತನದ ಜನಾಭಿಪ್ರಾಯ ಸಂಗ್ರಹ ಅಲ್ಲ. ಮತದಾರರ ಜಾಗೃತಿಯ ಉದ್ದೇಶವನ್ನು ಚುನಾವಣಾ ಅಕ್ರಮದ ಕುರಿತಾದ ಜನಾಭಿಪ್ರಾಯವೆಂದು ಬಿಂಬಿಸುವುದು ಸರಿಯಲ್ಲ. ಇದು ಜನರ ದಾರಿ ತಪ್ಪಿಸುವ ದುರುದ್ದೇಶದ ರಾಜಕೀಯ ಹುನ್ನಾರವಾಗಿದೆ.

ನಾಲ್ಕನೆಯದಾಗಿ, ಸಮೀಕ್ಷೆ ನಡೆಸಿದವರ ಹಿನ್ನೆಲೆಯನ್ನು ಮಾಧ್ಯಮಗಳು ಕೂಡಾ ಪರಿಶೀಲಿಸಿದಂತಿಲ್ಲ. ಈ ಸಮೀಕ್ಷೆಯನ್ನು ಡಾ. ಆರ್. ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಬಾಲಸುಬ್ರಮಣ್ಯಂ ಅವರು ಪ್ರಸ್ತುತ ಕೇಂದ್ರ ಸರ್ಕಾರ ನೇಮಿಸಿರುವ ಒಂದು ಹುದ್ದೆಯಲ್ಲಿದ್ದಾರೆ. ಇವರು 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬರೆದಿರುವ ಪುಸ್ತಕವನ್ನು ನೋಡಿದರೆ ಈ ಮಹಾಶಯರು ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ?

ಐದನೆಯದಾಗಿ, ಸಮೀಕ್ಷಾ ವರದಿಯನ್ನು ಉಲ್ಲೇಖಿಸಿ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಲ್ಲಿ ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಆರೋಪದಲ್ಲಿ ಹುರುಳಿಲ್ಲ ಎನ್ನುವುದನ್ನು ಹೇಳಲು ಪ್ರಯತ್ನಿಸಿರುವುದು ವಿಷಾದನೀಯ. ರಾಹುಲ್‌ ಗಾಂಧಿ ಅವರು ಪ್ರಜಾಪ್ರಭುತ್ವವನ್ನಾಗಲಿ, ಚುನಾವಣೆಯನ್ನಾಗಲಿ ಪ್ರಶ್ನಿಸಿಲ್ಲ. ಅವರು ಚುನಾವಣಾ ಆಯೋಗ ಪಾರದರ್ಶಕವಾಗಿ ತಯಾರಿಸಿರುವ ಮತದಾರರ ಪಟ್ಟಿ ಮತ್ತು ಮತಗಟ್ಟೆಗಳ ಸಿಸಿಟಿವಿ ದೃಶ್ಯಗಳನ್ನು ಕೇಳಿದ್ದಾರೆ. ಇವಿಎಂನ ಕಾರ್ಯವೈಖರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯುಕ್ತರನ್ನು ನೇಮಕಗೊಳಿಸುವ ಪ್ರಕ್ರಿಯೆ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಈ ಯಾವ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಸಮಂಜಸ ಉತ್ತರವನ್ನು ಕೊಟ್ಟಿಲ್ಲ.

ಅಂತಿಮವಾಗಿ, ಮತಗಳವು ಒಂದು ಘೋಷಣೆಯಲ್ಲ. ಅದು ಆರೋಪಪಟ್ಟಿ. ಆಳಂದದಲ್ಲಿ ಸುಮಾರು 5,994 ಅಧಿಕೃತ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಎಸ್ಐಟಿ 22,000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದೆ. ಅದರಲ್ಲಿ ಪಕ್ಷದ ಮಾಜಿ ಶಾಸಕರು ಸೇರಿದಂತೆ 7 ಮಂದಿ ಆರೋಪಿಗಳಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೂ ಆರೋಪದ ಕುರಿತು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಯನ್ನು ನಡೆಸಿದೆ. ಆರೋಪವನ್ನು ಮರೆಮಾಚಲು ಚುನಾವಣಾ ಆಯೋಗವೇ ವ್ಯವಸ್ಥಿತವಾಗಿ ಪ್ರಯತ್ನಿಸಿರುವುದು ಕಂಡುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *