ಪ್ರತಿಭಟನೆಗೆ ಬಂದ ರೈತ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದ ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ರಾಜ್ಯಾದ್ಯಂತ ಸಾಲು ಸಾಲು ಹೃದಯಾಘಾತ ಪ್ರಕರಣಗಳು ಜನತೆಯನ್ನು ನಿದ್ರೆಗೆಡಿಸಿದೆ.

ಹೃದಯಾಘಾತದಿಂದ ಮೃತಪಟ್ಟ ರೈತನನ್ನು ಈಶ್ವರ್ (50) ಎಂದು ಗುರುತಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ನಿವಾಸಿಯಾದ ಈಶ್ವರ್ ರೈಲಿನ ಮೂಲಕ ಬೆಂಗಳೂರಿಗೆ ಆಗಮಿಸಿ ಮೆಜೆಸ್ಟಿಕ್ ನಲ್ಲಿಇಳಿದು ನಗರದ ಫ್ರೀಡಂ ಪಾರ್ಕ್ಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು.
ಈ ವೇಳೆ ಈಶ್ವರ್ ಮೆಜೆಸ್ಟಿಕ್ ರೈಲು ನಿಲ್ದಾಣದ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಪೊಲೀಸರು ಸಿಪಿಆರ್ ಮಾಡಿ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ.
