ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಬ್ಬದ ಗಿಫ್ಟ್ – ಒಂದು ಕಂತಿನ ಸಹಾಯಧನ ಬಿಡುಗಡೆ!

ಬೆಳಗಾವಿ: ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಒಂದು ತಿಂಗಳ ಭತ್ಯೆ ಬಿಡುಗಡೆ ಮಾಡುವುದಾಗಿ ಅವರು ಘೋಷಿಸಿದ್ದಾರೆ. ಈಗಾಗಲೇ ಒಂದು ತಿಂಗಳ ಹಣವನ್ನು ಖಜಾನೆಗೆ ಕಳುಹಿಸಲಾಗಿದ್ದು, ಫಲಾನುಭವಿಗಳ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಲಾಗಿದೆ.
₹2,000 ಸಹಾಯಧನದ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.