Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೇವರ್ಗಿ ಆಸ್ಪತ್ರೆಯ OPD ಪುಸ್ತಕದಲ್ಲಿ ಸಿನಿಮಾ ಹಾಡು: ಲೋಕಾಯುಕ್ತಕ್ಕೆ ಬೇಜವಾಬ್ದಾರಿಯ ದರ್ಶನ!

Spread the love

ಕಲಬುರಗಿ : ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ (ಓಪಿಡಿ) ದಾಖಲಾತಿ ಪುಸ್ತಕದಲ್ಲಿ ರೋಗಿಗಳ ವಿವರಗಳ ಬದಲಿಗೆ ‘ಎರಡು ಕನಸು’ ಚಲನಚಿತ್ರದ ‘ಪೂಜಿಸಲೆಂದೇ ಹೂಗಳ ತಂದೆ..’

ಎಂಬ ಸಿನಿಮಾ ಹಾಡನ್ನು ಸಿಬ್ಬಂದಿಯೊಬ್ಬರು ಬರೆದಿರುವ ಗಂಭೀರ ಲೋಪ ಬಯಲಾಗಿದೆ.

ರಿಜಿಸ್ಟ್ರಾರ್ ಬುಕ್‌ನಲ್ಲಿ ಹಾಡು ಕಂಡು ಲೋಕಾಯುಕ್ತ ಆಫೀಸರ್ ಶಾಕ್:

ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಹೊರ ರೋಗಿಗಳ ವಿಭಾಗದ ರಿಜಿಸ್ಟ್ರಾರ್ ಪರಿಶೀಲನೆ ವೇಳೆ ಹಾಡು ಬರೆದಿರುವುದು ಕಂಡು ಶಾಕ್ ಲೋಕಾಯುಕ್ತ ಎಸ್‌ಪಿ ಶಾಕ್‌ ಆಗಿದ್ದಾರೆ. ‘ಪೂಜಿಸಲೆಂದೇ ಹೂಗಳ ತಂದೆ ದರುಶನ ಕೋರಿ ನಾ ನಿಂದೇ ತೆರೆಯೋ ಬಾಗಿಲನು ರಾಮ.. ಮೋಡದಮೇಲೆ ಚಿನ್ನದ ನೀರು ಚೆಲ್ಲುತ ಸಾಗಿದೆ ಹೊನ್ನಿನ ತೇರು ಮಾಣಿಕ್ಯದಾರತಿ ಉಷೆತಂದಿಹಳು ತಾಮಸವೇಕಿನ್ನು ಸ್ವಾಮಿ, ತೆರೆಯೋ ಬಾಗಿಲನು, ರಾಮ…’ ಅಂತಾ ಇಡೀ ಹಾಡನ್ನು ಬರೆದಿರುವ ತಾಲೂಕು ಆಸ್ಪತ್ರೆ ಸಿಬ್ಬಂದಿ. ಸಿಬ್ಬಂದಿಯ ಈ ಕೃತ್ಯಕ್ಕೆ ಗರಂ ಆದ ಎಸ್‌ಪಿ ಅವರು “ಇದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಕ್ಷೇತ್ರದ ಆಸ್ಪತ್ರೆನಾ? ಎಂದು ಪ್ರಶ್ನಿಸಿದ್ದಾರೆ. ಆಸ್ಪತ್ರೆಯ ಆಡಳಿತದ ನಿರ್ಲಕ್ಷ್ಯ ಮತ್ತು ಸಿಬ್ಬಂದಿಯ ಬೇಜವಾಬ್ದಾರಿತನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ:

ಕಲಬುರಗಿಯ ಆರೋಗ್ಯ ಮತ್ತು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಈ ಘಟನೆ ಮತ್ತೊಂದು ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತೀವ್ರ ರಕ್ತಸ್ರಾವವಾಗಿ ರೋಗಿಯೊಬ್ಬರು ಮೃತಪಟ್ಟ ಘಟನೆ ಜನರ ಮನಸ್ಸಿನಲ್ಲಿ ಇನ್ನೂ ಮಾಸಿರುವಾಗಲೇ, ಈ ಹೊಸ ಘಟನೆ ಸಾರ್ವಜನಿಕರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿಯಲ್ಲಿ ಕೊಲೆ, ಸುಲಿಗೆ, ದೌರ್ಜನ್ಯ, ದರೋಡೆ, ಡ್ರಗ್ಸ್ ಕಳ್ಳಸಾಗಣೆಯಂತಹ ಘಟನೆಗಳ ಜೊತೆಗೆ ಆಸ್ಪತ್ರೆಗಳಲ್ಲಿನ ಈ ರೀತಿಯ ಅವ್ಯವಸ್ಥೆಗಳು ಜನರಲ್ಲಿ ಆಡಳಿತದ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುವಂತೆ ಮಾಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಆಡಳಿತವು ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.


Spread the love
Share:

administrator

Leave a Reply

Your email address will not be published. Required fields are marked *