Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ: ಬುಧವಾರದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ – ಡಿಸಿಎಂ ಡಿಕೆ ಶಿವಕುಮಾರ್

Spread the love

ಬೆಂಗಳೂರು: ಮಾಜಿ ಸಚಿವರು ಹಾಗೂ ಕಾಂಗ್ರೆಸ್ (Congress) ಶಾಸಕರಾದ ಹೆಚ್.ವೈ ಮೇಟಿ (HY Meti) ಅವರ ನಿಧನದಿಂದಾಗಿ ಬುಧವಾರ (ನ.5) ನಿಗದಿಯಾಗಿದ್ದ `ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್.ವೈ ಮೇಟಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಮುಖ್ಯಮಂತ್ರಿಗಳು ನನಗೆ ಕರೆ ಮಾಡಿ ಬಾಗಲಕೋಟೆಗೆ ಹೋಗುವ ಬಗ್ಗೆ ಚರ್ಚೆ ಮಾಡಿದರು. ಹೀಗಾಗಿ ಮತ್ತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ, ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಹೇಳಿದರು

ಮೇಟಿ ಅವರು ನನಗೆ ಬಹಳ ಆತ್ಮೀಯರು. ಸಿದ್ದರಾಮಯ್ಯ ಅವರ ಜೊತೆಯಲ್ಲೇ ನಮ್ಮ ಪಕ್ಷಕ್ಕೆ ಸೇರಿ ಶಾಸಕರಾಗಿ ಹಾಗೂ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈಗ ಬಿಟಿಡಿಎ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.


Spread the love
Share:

administrator

Leave a Reply

Your email address will not be published. Required fields are marked *