Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗದಗ: ಪೊಲೀಸ್ ಠಾಣೆಗೆ ಬೆಂಕಿ – 23 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

Spread the love

ಗಗದ : ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದ 23 ಮಂದಿಗೆ 5 ವರ್ಷ ಕಠಿಣ ಶಿಕ್ಷೆ, 36 ಲಕ್ಷ ರೂ. ದಂಡ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರಲ್ಲಿ ಬೆಂಕಿ ಹಚ್ಚಿ ಪುಂಡಾಟ ಮೆರೆಯಲಾಗಿತ್ತು, ಈ ಘಟನೆಯಿಂದ ರಾಜ್ಯವೇ ಬೆಚ್ಚಿಬಿದ್ದಿತ್ತು. ಇದೀಗ 8 ವರ್ಷಗಳ ನಂತರ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಮಂದಿಗೆ ಐದು ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ.

ದೊಂಬಿ ಪ್ರಕರಣವೊಂದರಲ್ಲಿ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ದಂಡ ವಸೂಲಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ಹೊರ ಬಿದ್ದಿದೆ. ಇನ್ನು ಈ ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆ ಹಾನಿ ಪರಿಹಾರವಾಗಿ 12 ಲಕ್ಷ 72 ಸಾವಿರ ರೂಪಾಯಿ ನೀಡಲು ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೂಚನೆ ನೀಡಿದೆ.

ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರ ಫೆ.5ರಂದು ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೋಲಿಸರು ಥಳಿಸಿದ್ದರೆಂದು ಆರೋಪಿಸಿ ಬೆಂಕಿ ಹಚ್ಚಿ ಪುಂಡಾಟ ಮೆರೆಯಲಾಗಿತ್ತು. ಈ ಘಟನೆಯಲ್ಲಿ ಬಟ್ಟೂರು ಗ್ರಾಮದ ಚಾಲಕ ಶಿವಪ್ಪ ಡೋಣಿ ಎಂಬಾತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ. ಚಾಲಕನ ಸಾವಿನಿಂದ ಆಕ್ರೋಶಗೊಂಡ ಗುಂಪು ಆಸ್ಪತ್ರೆಯಿಂದ ನೇರವಾಗಿ ಶವವನ್ನು ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ಮಾಡಿತ್ತು. ಪ್ರತಿಭಟನೆಯಲ್ಲಿದ್ದ ಜನರು ರೊಚ್ಚಿಗೆದ್ದು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು.

ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೆ ಪೊಲೀಸ್​ ಸಿಬ್ಬಂದಿ ‌ಠಾಣೆಯ ಹಿಂಬಾಗಿನಿಲಿಂದ ಓಡಿ ಹೋಗಿ ಜೀವವನ್ನು ಉಳಿಸಿಕೊಂಡಿದ್ದರು.

ಗಲಭೆಗೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಆರೋಪಿತ 112 ಜನರ ಪೈಕಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿಯಾಗಿದ್ದ. ಉಳಿದ 103 ಜನರ ಮೇಲೆ ತನಿಖೆ ನಡೆಸಲಾಗಿದ್ದು, ಅದರಲ್ಲಿ 23 ಜನರ ಆರೋಪ ಸಾಬೀತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *