ಮಂಗಳೂರಿನಲ್ಲಿ ಗಾಂಜಾ ಸೇವನೆ ಪ್ರಕರಣ: ನಾಲ್ವರು ಬಂಧನ

ಮಂಗಳೂರು: ಕಾವೂರು ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೊಂದೇಲ್ ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಮಂಜೇಶ್ವರ ಉದ್ಯಾವರ ನಿವಾಸಿ ಅಬ್ದುಲ್ ಅಜೀಜ್ (39), ಕುಂಜತ್ತೂರು ನಿವಾಸಿ ಅಪ್ಸರ್ (36), ಪಂಜಿಮೊಗರು ಜಂಕ್ಷನ್ ಬಳಿ ಪುತ್ತೂರು ನಿವಾಸಿ ಮೊಹಮ್ಮದ್ ಫೈಜಲ್ (27), ಸೆಂಟ್ರಲ್ ಮಾರ್ಕೆಟ್ ಬಳಿ ಬಿಹಾರ ಮೂಲದ ಫಳ್ನೀರ್ನಲ್ಲಿ ವಾಸವಿದ್ದ ಇಮ್ರಾನ್ ಆಲಮ್ (18) ಎಂಬಾತನನ್ನು ಬಂಧಿಸಿದ್ದಾರೆ.
ವೈದ್ಯಕೀಯ ತಪಾಸಣೆ ವೇಳೆ ಗಾಂಜಾ ಸೇವನೆ ದೃಢಪಟ್ಟಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.