Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶ್ರೀರಂಗಪಟ್ಟಣದಲ್ಲಿ ಗಾಂಜಾ ಸಾಗಾಟ: ಮಾರುತಿ 800 ಕಾರು ಸಹಿತ ಯುವಕನ ಬಂಧನ

Spread the love

ಶ್ರೀರಂಗಪಟ್ಟಣ : ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಪಟ್ಟಣದ ಅಬಕಾರಿ ಪೊಲೀಸರು ಬಂಧಿಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಫೆ.18ರ ತಡರಾತ್ರಿ ಶ್ರೀರಂಗಪಟ್ಟಣ- ಕೆಆರ್ ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಪಂ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಮಾರುತಿ 800 ಕಾರ್‌ನಲ್ಲಿ 2040 ಕೆ.ಜಿ ಒಣ ಗಾಂಜಾವನ್ನು ಸಾಗಿಸುತ್ತಿದ್ದ ಪಾಂಡವಪುರ ಟೌನ್ ನಿವಾಸಿ ಯೂನಸ್ ಬಿನ್ ಅಜ್ಮಲ್(23) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಶ್ರೀರಂಗಪಟ್ಟಣ ವಲಯದ ಅಬಕಾರಿ ನಿರೀಕ್ಷಕರಾದ ಪ್ರಪುಲ್ಲ ಚಂದ್ರ ವೈ.ಜೆ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಶ್ರೀರಂಗಪಟ್ಟಣ ವಲಯದ ಅಬಕಾರಿ ನಿರೀಕ್ಷಕರಾದ ಪ್ರಪುಲ್ಲ ಚಂದ್ರ ವೈ.ಜೆ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕರಾದ ಶಿವಣ್ಣ, ಅಬಕಾರಿ ಹೆಡ್ ಕಾನ್ಸ್ಟೇಬಲ್ ರಾಮು, ಹಾಗೂ ವಾಹನ ಚಾಲಕರಾದ ನಾಗರಾಜು ಮತ್ತು ಹರವು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಭಾಗವಹಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *