Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಾಲಾ ಸಮವಸ್ತ್ರ ಧರಿಸದಿದ್ದರೆ ಶಿಕ್ಷಕರು ಬೈಯುತ್ತಾರೆಂದು ವಿಷ ಸೇವಿಸಿದ ಬಾಲಕಿ

Spread the love

ಚಿಕ್ಕಮಗಳೂರು:ಸಮವಸ್ತ್ರ ಧರಿಸದೆ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ಹೆದರಿ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

13 ವರ್ಷದ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಹೇಳಲಾಗಿದೆ.

ಲಿಂಗದಹಳ್ಳಿಯಲ್ಲಿ ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಗೆ ಶಾಲಾ ಸಮವಸ್ತ್ರವನ್ನು ಶಿಕ್ಷಕರು ವಿತರಿಸಿದ್ದರು. ಸೋಮವಾರದಿಂದ ಸಮವಸ್ತ್ರ ಧರಿಸಿಕೊಂಡು ಬರುವಂತೆ ಹೇಳಿದ್ದರು. ನಿವೇದಿತಾ ಪೋಷಕರು ಟೈಲರ್ ಬಳಿ ಸಮವಸ್ತ್ರ ಹೊಲಿಯಲು ಬಟ್ಟೆ ಕೊಟ್ಟಿದ್ದರು. ಆದರೆ ಟೈಲರ್ ಸಮವಸ್ತ್ರವನ್ನು ಹೊಲಿದಿರಲಿಲ್ಲ. ಸಮವಸ್ತ್ರವಿಲ್ಲದೆ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ನಿವೇದಿತಾ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *