Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಳ್ಳಾರಿಯ ಜ್ಯುವೆಲ್ಸ್ ಮಳಿಗೆಯಲ್ಲಿ ಶಬರಿಮಲೆ ಚಿನ್ನ ಪತ್ತೆ: ನಾಣ್ಯಗಳ ರೂಪದಲ್ಲಿ 476 ಗ್ರಾಂ ಚಿನ್ನ ವಶ; ಮಾಲೀಕನ ವಿಚಾರಣೆ

Spread the love

ಬೆಂಗಳೂರು/ತಿರುವನಂತಪುರಂ: ಶಬರಿಮಲೆಯಲ್ಲಿ (Sabarimala Ayyappan Temple) ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್‌ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನ (Unnikrishnan Potti) ವಿಶೇಷ ತನಿಖಾ ತಂಡದ (Kerala SIT) ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದಾರೆ.

ಬೆಂಗಳೂರಿನ (Bengaluru) ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವೂ ಇದೆ. ಹೀಗಾಗಿ ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತರಲಾಗಿದೆ. ಅಲ್ಲದೇ ಕದ್ದ ಚಿನ್ನವನ್ನ ಬಳ್ಳಾರಿಯಲ್ಲಿ ಮಾರಾಟ ಮಾಡಿರುವ ಆರೋಪದ ಹಿನ್ನೆಲೆ ಬಳ್ಳಾರಿಯಲ್ಲು ತಪಾಸಣೆ ನಡೆಸಿದ್ದು,‌ ಒಂದಿಷ್ಟು ಚಿನ್ನವನ್ನ ರಿಕವರಿ ಮಾಡಲಾಗಿದೆ. ಅದಕ್ಕೆ ಪೂರಕವಾದ ದಾಖಲೆಗಳು ಬೆಂಗಳೂರಿನಲ್ಲಿದ್ದ ಕಾರಣ ಇಬ್ಬರು ಅಧಿಕಾರಿಗಳು ಕೋರ್ಟ್ ಅನುಮತಿಯೊಂದಿಗೆ ಬಂದು ದಾಖಲೆ ಕಲೆ ಹಾಕಿದ್ದಾರೆ

ಶಬರಿಮಲೆಯ ಚಿನ್ನ ಬಳ್ಳಾರಿಯಲ್ಲಿ ಪತ್ತೆ
ಎಸ್‌ಪಿ ಶಶಿಧರನ್ ನೇತೃತ್ವದ ಕೇರಳದ ಎಸ್‌ಐಟಿ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ನಿನ್ನೆ ರೊದ್ದಂ ಜ್ಯುವೆಲ್ಸ್‌ ಮಳಿಗೆ ಮೇಲೆ ದಾಳಿ ನಡೆಸಿದೆ. ಈ ವೇಳೆ ನಾಣ್ಯಗಳ ರೂಪದಲ್ಲಿ 476 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಚಿನ್ನವನ್ನ ಪೊಟ್ಟಿಯಿಂದ ರೊದ್ದಂ ಗೋಲ್ಡ್ ಮಾಲೀಕ ಗೋವರ್ಧನ್ ಖರೀದಿ ಮಾಡಿದ್ದ. ಚಿನ್ನ ವಶಕ್ಕೆ ಪಡೆದ ಎಸ್‌ಐಟಿ ತಂಡ ಗೋವರ್ಧನ್‌ ವಿಚಾರಣೆ ನಡೆಸಿದೆ. ಸದ್ಯ ರೊದ್ದಂ ಗೋಲ್ಡ್ ಶಾಪ್ ಬೀಗ ಹಾಕಲಾಗಿದೆ.

ಅಲ್ಲದೇ ಬೆಂಗಳೂರಿನ ಉನ್ನಿಕೃಷ್ಣನ್‌ ಮನೆಯಲ್ಲಿ ಚಿನ್ನದ ಗಟ್ಟಿ ಹಾಗೂ 2 ಲಕ್ಷ ರೂ. ನಗದು ಪತ್ತೆಯಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?
ಇತ್ತೀಚೆಗಷ್ಟೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ (Gold) ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದರು.

2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿತ್ತು.


Spread the love
Share:

administrator

Leave a Reply

Your email address will not be published. Required fields are marked *