Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಕ್ಷಿಣ ಕನ್ನಡದಲ್ಲಿ ದಾರುಣ ಘಟನೆ: ಪತ್ನಿಯನ್ನೇ ಚೂರಿ ಇರಿದು ಕೊಂದ ಪತಿ!

Spread the love

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಬಾಜಾರು ನಿವಾಸಿ ಝೀನತ್(38) ಎಂದು ಗುರುತಿಸಲಾಗಿದೆ.

ರಫೀಕ್, ಕೊಲೆ ಆರೋಪಿ. ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ರನ್ನು ಚೂರಿಯಿಂದ ಇರಿದಿದ್ದಾನೆ.

ಝೀನತ್ ಎಂಬವರಿಗೆ, ರಫೀಕ್ ಎಂಬಾತನೊಂದಿಗೆ ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಈ ದಂಪತಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು.‌

ನಿನ್ನೆ ಕೌಟುಂಬಿಕ ಕಲಹ ನಡೆದಾಗ ಆರೋಪಿ ರಫೀಕ್ ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆಯು ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು‌ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಆರೋಪಿಯನ್ನು ಸ್ಥಳಕ್ಕೆ ಕರೆ ತಂದು ಮಹಜರು ನಡೆಸಿದ್ದಾರೆ. ಸರಿ ಸುಮಾರು ಒಂದು ಗಂಟೆಗಳ ಕಾಲ ಮಹಜರು ನಡೆಯಿತು.


Spread the love
Share:

administrator

Leave a Reply

Your email address will not be published. Required fields are marked *