ಬಾಲಕಿಗೆ ಕಿರುಕುಳ, ಕೊಲೆ ಯತ್ನ: ಪರಾರಿಯಾಗಲು ಯತ್ನಿಸಿದ್ದ ಆರೋಪಿಯ ಬಲಗೈ ಮುರಿತ

ಮೀರತ್: ಹದಿನಾಲ್ಕು ವರ್ಷದ ಬಾಲಕಿಗೆ ಕಿರುಕುಳ ನೀಡಿ, ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೀರತ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಈ ಘಟನೆಯು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಆರೋಪಿಯನ್ನು 20 ವರ್ಷದ ಜಾನು ಅಲಿಯಾಸ್ ಜಾನೆ ಆಲಂ ಎಂದು ಗುರುತಿಸಲಾಗಿದೆ.ಆರೋಪಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಗುಂಡಿಗೆ ಬಿದ್ದು ಬಲಗೈ ಮುರಿದಿದೆ. ಆತನನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.
