Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೆಆರ್‌ಎಸ್‌ ಜಲಾಶಯಕ್ಕೆ ಭರ್ಜರಿ ಒಳಹರಿವು: ನಾಲ್ಕು ದಿನದಲ್ಲಿ 11 ಅಡಿ ನೀರಿನ ಹೆಚ್ಚಳ

Spread the love

ಮಂಡ್ಯ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿಯಾದಂತಾಗಿದೆ.

ಜೂನ್‌ 2ನೇ ವಾರದಲ್ಲೇ ಡ್ಯಾಂ ಭರ್ತಿ ಸಾಧ್ಯತೆ:
ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಇದ್ದು, ನಾಲ್ಕೇ ದಿನದಲ್ಲಿ 11 ಅಡಿ ಭರ್ತಿಯಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಜೂನ್ ಎರಡನೇ ವಾರದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ.

ಮುಂಗಾರು ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವುದು ರೈತರ ಮುಖದಲ್ಲಿ ಮಂದಹಾಸ ತಂದಿದೆ. ಹಲವು ವರ್ಷಗಳ ಬಳಿಕ ಮೇ ತಿಂಗಳಿನಲ್ಲಿ ಈ ಮಟ್ಟದ ಒಳಹರಿವು ಇದೆ. ಕಳೆದ ನಾಲ್ಕು ದಿನದ ಹಿಂದೆ ನೀರಿನ ಮಟ್ಟ 89 ಅಡಿಗೆ ಕುಸಿದಿತ್ತು. ಇದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತೆ ಎಂದು ಅಲ್ಲಿನ ಜನರು ಆತಂಕಕ್ಕೊಳಗಾಗಿದ್ದರು.

124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್‌ನಲ್ಲಿ 100.10 ಅಡಿ ನೀರಿದೆ. 49.452 ಟಿಎಂಸಿ (TMC) ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 22.222 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಒಳಹರಿವಿನ ಪ್ರಮಾಣ 19,448 ಕ್ಯುಸೆಕ್ ಇದ್ದು, 670 ಕ್ಯುಸೆಕ್ ಹೊರಹರಿವಿದೆ.


Spread the love
Share:

administrator

Leave a Reply

Your email address will not be published. Required fields are marked *