Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೇ ತಿಂಗಳಲ್ಲೇ ಮಳೆ ಅಬ್ಬರ – ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿ ಭಕ್ತರಿಗೆ ಎಚ್ಚರಿಕೆ

Spread the love

ಪುತ್ತೂರು: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.

ಈ ಬಾರಿ ಮೇ ತಿಂಗಳಲ್ಲೇ ಮುಂಗಾರು ಮಳೆ ಪ್ರವೇಶ ಮಾಡಿದ ಹಿನ್ನಲೆ ಮಳೆ ಅಬ್ಬರ ಮುಂದುವರೆದಿದೆ. ಪಶ್ಚಿಮಘಟ್ಟದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೇಶದ ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಹಿನ್ನಲೆ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಆಡಳಿತ ಮಂಡಳಿ ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಗಳ ನೇಮಕ ಮಾಡಿದೆ.


Spread the love
Share:

administrator

Leave a Reply

Your email address will not be published. Required fields are marked *