Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಯಚೂರಿನಲ್ಲಿ ಬಿರುಗಾಳಿ ಮತ್ತು ಭಾರೀ ಮಳೆಯಿಂದ 30 ಎಕರೆ ದಾಳಿಂಬೆ ಬೆಳೆ ನಾಶ – ಪರಿಹಾರಕ್ಕೆ ಆಗ್ರಹ

Spread the love

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿರುವ ಘಟನೆ ಸಿಂಧನೂರುತಾಲೂಕಿನಲ್ಲಿ ನಡೆದಿದೆ.ಗೊಬ್ಬರಕಲ್, ಹುಡಾ, ಸಾಲಗುಂದ ಸೇರಿ ವಿವಿಧೆಡೆ ಸುರಿದ ಭಾರೀ ಮಳೆಗೆ ಮಲ್ಲಯ್ಯ ಸ್ವಾಮಿ, ಶಿವಲಿಂಗಯ್ಯಸ್ವಾಮಿ, ಹನುಮಂತರೆಡ್ಡಿ ಅವರಿಗೆ ಸೇರಿದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿದೆ.

ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ದಾಳಿಂಬೆ ಬೆಳೆ ನೆಲಕ್ಕೆ ಬಿದ್ದು ಹಾಳಾಗಿದೆ. ಎಕರೆಗೆ 3 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ ದಾಳಿಂಬೆ ಕೆಲವೇ ಕೆಲವು ದಿನಗಳಲ್ಲಿ ಮಾರುಕಟ್ಟೆ ಸೇರಬೇಕಿತ್ತು. ಆದರೆ ಇದೀಗ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕೆ.ಜಿಗೆ 130 ರಿಂದ 160 ರೂ.ಯಂತೆ ಮಾರಾಟವಾಗುತ್ತಿದ್ದು, ಮಳೆ ಸೃಷ್ಟಿಸಿದ ಅವಾಂತರದಿಂದಾಗಿ ಎಲ್ಲವೂ ಮಣ್ಣುಪಾಲಾಗಿದೆ. ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದ್ದು, ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *