Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹನಿಟ್ರ್ಯಾಪ್‌ ಪ್ರಕರಣ: ಉನ್ನತ ತನಿಖೆಗೆ ಸಿಎಂ ಖಡಕ್‌ ನಿರ್ಧಾರ

Spread the love

ವಿಧಾನಸಭೆ : ‘ತಮ್ಮ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. 100ಕ್ಕೆ 100ರಷ್ಟು ಗಹನ ತನಿಖೆ ನಡೆಸಿ ಪ್ರಕರಣವನ್ನು ಭೇದಿಸುತ್ತೇವೆ. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ ಬಿಡಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಣ್ಣ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣ ಕುರಿತು ಹೈಕೋರ್ಟ್‌ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂಬ ಬಿಜೆಪಿ ಶಾಸಕರ ಆಗ್ರಹಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ‘ಕೆ.ಎನ್‌. ರಾಜಣ್ಣ ಅವರು ನಮ್ಮ ಸಂಪುಟದ ಸಚಿವರು, ಪರಿಶಿಷ್ಟ ವರ್ಗದ ನಾಯಕರು. ಅವರು ತಮ್ಮ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ಹೇಳಿದ್ದಾರೆ.

ಅದಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸದನದಲ್ಲಿ ಉತ್ತರ ನೀಡಿ, ಉನ್ನತ ಮಟ್ಟದ ತನಿಖೆ ಮಾಡಿಸುತ್ತೇವೆ ಎಂದಿದ್ದಾರೆ. ರಾಜಣ್ಣ ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಆದರೂ, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಶಾಸಕರ, ಸಚಿವರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ’ ಎಂದರು.
ಹನಿಟ್ರ್ಯಾಪ್‌ ಪ್ರಕರಣದಲ್ಲಿ ನಮ್ಮ ಪಕ್ಷದವರು, ವಿರೋಧ ಪಕ್ಷದವರು ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಸದನದಲ್ಲಿ ಸಚಿವರೇ ಹೇಳಿಕೆ ನೀಡಿದ ಮೇಲೆ ಸರ್ಕಾರ ಸುಮ್ಮನಿರುವುದಿಲ್ಲ. ಈ ಪ್ರಕರಣ ಕುರಿತು ತನಿಖೆ ನಡೆಸುತ್ತೇವೆ. ವಿರೋಧ ಪಕ್ಷದವರು ನ್ಯಾಯಾಂಗ ತನಿಖೆಯ ಸಲಹೆ ನೀಡಿದ್ದಾರೆ. ಈ ಎಲ್ಲದರ ಕುರಿತು ಗೃಹ ಸಚಿವರು ಸೇರಿದಂತೆ ಹಿರಿಯ ಸಚಿವರೊಂದಿಗೆ ಚರ್ಚಿಸಿ, ಯಾವ ರೀತಿ ತನಿಖೆ ನಡೆಸಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಎಲ್ಲ ಶಾಸಕರು, ಸಚಿವರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ಪ್ರಕರಣದ ತನಿಖೆಯಾದರೆ ಎಲ್ಲವೂ ಬಹಿರಂಗವಾಗುತ್ತದೆ’ ಎಂದು ಹೇಳಿದರು.

  • ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ನವರು ಯಾರೇ ಆಗಲಿ ಸುಮ್ಮನೇ ಬಿಡಲ್ಲ
  • ಟ್ರ್ಯಾಪ್‌ ಆಗಿದ್ದಾಗಿ ರಾಜಣ್ಣ ಹೇಳಿದ್ದಾರೆ । ವಿಷಯ ಗಂಭೀರ ಪರಿಗಣನೆ.
    100ಕ್ಕೆ 100ರಷ್ಟು ಗಹನ ತನಿಖೆ । ಶಾಸಕ, ಸಚಿವರ ರಕ್ಷಣೆಗೆ ಬದ್ಧ: ಸಿಎಂ

ಸದನದಲ್ಲಿ ಸಿಎಂ ಹೇಳಿದ್ದೇನು?

  • ಹನಿಟ್ರ್ಯಾಪ್‌ ಆಗಿದ್ದಾಗಿ ಸದನದಲ್ಲೇ ಸಚಿವ ರಾಜಣ್ಣ ಹೇಳಿಕೆ.
  • ಈ ಬಗ್ಗೆ ವಿಪಕ್ಷದವರಿಂದ ನ್ಯಾಯಾಂಗ ತನಿಖೆಯ ಸಲಹೆ
  • ಗೃಹ ಸಚಿವ, ಹಿರಿಯ, ಸಚಿವರ ಜತೆ ಚರ್ಚೆ ನಡೆಸುವೆ
  • ಯಾವ ರೀತಿಯ ತನಿಖೆ ಎಂದು ನಂತರ ನಿರ್ಧಾರ
  • ಯಾರನ್ನೂ ಈ ವಿಚಾರದಲ್ಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ
  • ಪ್ರಕರಣದಲ್ಲಿ ತನಿಖೆ ಆದರೆ ಎಲ್ಲ ಬಟಾಬಯಲು: ಸಿಎಂ

ರಾಜಣ್ಣ ಪ್ರತಿಕ್ರಿಯಿಸಿದ್ದಕ್ಕೆ ಹನಿಟ್ರ್ಯಾಪ್‌ ಆಗಿದೆ: ಡಿಕೆಶಿ ಹನಿಟ್ರ್ಯಾಪ್ ಮಾಡುವವರು ಸುಮ್ಮ ಸುಮ್ಮನೆ ಏನಾದರೂ ನಿಮ್ಮ ಹತ್ತಿರ (ರಾಜಣ್ಣ) ಬರುತ್ತಾರ? ನೀವು ಹಲೋ ಎಂದರೆ ಅವರೂ ಹಲೋ ಹಲೋ ಎನ್ನುತ್ತಾರೆ. ನೀವು ವಿಶ್ ಮಾಡಿದ್ರೆ ನಾನೂ ವಿಶ್ ಮಾಡುತ್ತೇನೆ. ನೀವು ವಿಶ್ ಮಾಡದಿದ್ದರೆ ನಾನು ವಿಶ್ ಮಾಡುತ್ತೇನಾ? ನೀವು ಮಾತನಾಡಿದಿದ್ದರೆ ನಾನು ಮಾತನಾಡುತ್ತಿದ್ದೆನಾ? ಹನಿಟ್ರ್ಯಾಪ್‌ ಬಗ್ಗೆ ಶೀಘ್ರ ತನಿಖೆ ಆಗಲಿ. ಇದಕ್ಕೆ ಮೊದಲು ಟ್ರ್ಯಾಪ್‌ಗೆ ಒಳಗಾದವರು ಪೊಲೀಸರಿಗೆ ದೂರು ನೀಡಲಿ.- ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿ.


Spread the love
Share:

administrator

Leave a Reply

Your email address will not be published. Required fields are marked *