Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಿನ್ನಿಗೋಳಿಯಲ್ಲಿ ಭೀಕರ ಕಾರು ಅಪಘಾತ: ಮಗು ಸೇರಿ ಮೂವರಿಗೆ ಗಂಭೀರ ಗಾಯ

Spread the love

ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.

ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್(23), ಮಗು ಮೃತ್ತಿನ್ (2) ಎಂದು ಗುರುತಿಸಲಾಗಿದೆ.

ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಟೀಲು ಕಡೆಯಿಂದ ಕುಂದಾಪುರದ ಕಡೆಗೆ ಹೊರಟಿದ್ದ ಕಾರು ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮೂಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ಪಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ಸ್ಥಳೀಯರು ರಕ್ಷಿಸಿ ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸ್ಥಳೀಯ ಹಾರ್ಡ್ ವೇರ್ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *