Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭೀಕರ ಕಾರು ಅಪಘಾತ: ಮೂವರು ಸಾವು

Spread the love

ಬಳ್ಳಾರಿ: ಕಾರೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಲಕೋಟೆ ಪಟ್ಟಣದ 20ನೇ ವಾರ್ಡಿನ ದೇವಿನಗರ ಬಳಿ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ನಿಟ್ಟೂರಿನ ಪ್ರಸಾದ್ ರಾವ್ (75) ಸಿರುಗುಪ್ಪ ನಿವಾಸಿಗಳಾದ ವಿಜಯ (70) ಮತ್ತು ಸಂಧ್ಯಾ (35) ಮೃತಪಟ್ಟವರು ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡಿರುವ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರ ರಾವ್ (45) ಎಂಬವರನ್ನು ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲತಃ ನಿಟ್ಟೂರು ಗ್ರಾಮದವರಾದ, ಸದ್ಯ ಸಿರುಗುಪ್ಪ ನಗರದಲ್ಲಿ ವಾಸವಿರುವ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇವರು ಸಂಚರಿಸುತ್ತಿದ್ದ ಕಾರು ದೇವಿನಗರದ ಬಳಿ ತಲುಪಿದಾಗ ದಟ್ಟ ಮಂಜು ಕಾರಣ ಸರಿಯಾಗಿ ರಸ್ತೆ ಗೋಚರಿಸದೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ.

ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *