ಹೊಸದುರ್ಗ ಶಾಸಕನ ಕಾರು ಚಾಲಕ ಸೇರಿ ನಾಲ್ವರು ಬಂಧನ: ಜಾನಕಲ್ ಪ್ರಸನ್ನ ಕೊಲೆ ಪ್ರಕರಣ ಬಯಲು

ಚಿತ್ರದುರ್ಗ: ಕೊಲೆ ಪ್ರಕರಣವೊಂದರಲ್ಲಿ ಹೊಸದುರ್ಗ ಕಾಂಗ್ರೆಸ್ ಶಾಸಕ ಬಿ.ಜಿ.ಗೋವಿಂದಪ್ಪ ಅವರ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಯಶವಂತ್ ಸೇರಿ ನಾಲ್ವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ನಾಪತ್ತೆಯಾಗಿದ್ದರು. ಮಾರ್ಚ್ 21 ರಂದು ಈ ಸಂಬಂಧ ಹೊಸದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಲಿಂಗದಳ್ಳಿ ಬಳಿ ಪ್ರಸನ್ನ ಶವವಾಗಿ ಪತ್ತೆಯಾಗಿದ್ದರು
ಜುಲೈ 20 ರಂದು ಪ್ರಸನ್ನ ಕೊಲೆ ಪ್ರಕರಣ ಬಯಲಾಗಿದೆ. ಪ್ರಕರಣ ಸಂಬಂಧ ಪ್ರಸನ್ನ ಪತ್ನಿ, ಶಾಸಕ ಬಿ.ಜಿ.ಗೋವಿಂದಪ್ಪ ಕಾರು ಚಾಲಕ ಯಶವಂತ್, ಲೋಹಿತ್, ವೀರೇಶ್ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ
ಕೊಲೆ ಮಾಡಿ ಲಿಂಗದಳ್ಳಿ ಬಳಿ ಅರಣ್ಯದಲ್ಲಿ ಶವ ಎಸೆಯಲಾಗಿತ್ತು. ಲಿಂಗದಳ್ಳಿ ಮತ್ತು ಹೊಸದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
