Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ

Spread the love

ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್​ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ ಬಳಿ ಜಮಾಯಿಸಿದ್ದರು ಮತ್ತು ವಂಜಾರಂ ಪೊಲೀಸರು ಶವಗಳನ್ನು ವಶಪಡಿಸಿಕೊಂಡರು.

ಕೊಲಂಜಿ ನ್ಯಾಯಾಂಗ ಬಂಧನದಲ್ಲಿರುವುದರಿಂದ ದಂಪತಿಯ ಮೂವರು ಹೆಣ್ಣುಮಕ್ಕಳನ್ನು ಸಂಬಂಧಿಕರ ಆರೈಕೆಯಲ್ಲಿ ಬಿಡಲಾಗಿದೆ.

ಜೂನ್‌ನಲ್ಲಿ, ಬೆಂಗಳೂರು ಬಳಿ ಒಬ್ಬ ವ್ಯಕ್ತಿ ತನ್ನ ಹೆಂಡತಿಯನ್ನು ಕೊಂದು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಕತ್ತರಿಸಿದ ರುಂಡದೊಂದಿಗೆ ಶರಣಾದ ಆರೋಪದ ಮೇಲೆ ಬಂಧಿಸಲಾಗಿತ್ತು, ಆರೋಪಿಯನ್ನು ಹೆನ್ನಾಗರ ನಿವಾಸಿ ಶಂಕರ್ (28) ಎಂದು ಗುರುತಿಸಲಾಗಿತ್ತು.

ಶಂಕರ್ ತನ್ನ ಹೆಂಡತಿಯನ್ನು ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದ ಮತ್ತು ದಂಪತಿ ಇತ್ತೀಚೆಗೆ ಬಾಡಿಗೆ ಮನೆಗೆ ತೆರಳಿದ್ದರು. ಜೂನ್ 3 ರಂದು ಕೆಲಸದಿಂದ ತಡವಾಗಿ ಮನೆಗೆ ಹಿಂದಿರುಗಿದಾಗ, ತನ್ನ ಹೆಂಡತಿಯನ್ನು ಇನ್ನೊಬ್ಬ ವ್ಯಕ್ತಿಯೊಂದಿಗೆ ಕಂಡಿದ್ದಾನೆ. ಅವರ ಮೇಲೆ ಹಲ್ಲೆ ನಡೆಸಿ ನಂತರ ತನ್ನ ಹೆಂಡತಿಯ ಶಿರಚ್ಛೇದ ಮಾಡಿದ್ದ.


Spread the love
Share:

administrator

Leave a Reply

Your email address will not be published. Required fields are marked *