Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಪ್ರಾಣಿ ಸಾಗಾಟ: ಲಗೇಜ್‌ನಲ್ಲಿ ಪ್ರಾಣಿಗಳೊಂದಿಗೆ ಸಿಕ್ಕಿಬಿದ್ದ ಆರೋಪಿ ಬಂಧನ

Spread the love

ಬೆಂಗಳೂರು/ ಕಾರವಾರ: ಬ್ಯಾಂಕಾಕ್​ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಏರ್​ಪೋರ್ಟ್​ನ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನನ್ನು ಅರೆಸ್ಟ್​ ಮಾಡಿದ್ದು, ಲಗೇಜ್​ ಪರಿಶೀಲನೆ ವೇಳೆ ಬ್ಯಾಗ್​ನಲ್ಲಿ ಪ್ರಾಣಿಗಳಿರುವುದು ಗೊತ್ತಾಗಿದೆ. ವನ್ಯಜೀವಿ ಸಂರಕ್ಷಣಾ ಖಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಯಾಣಿಕನನ್ನು ಹೆಚ್ಚಿನ ವಿಚಾರಣಗೆ ಒಳಪಡಿಸಲಾಗಿದೆ.

ಅಕ್ರಮವಾಗಿ ಪ್ರಾಣಿ ಸಾಗಾಟ ಮಾಡಿದರೆ ಭಾರತದ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ಇದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತೆ. ಸಾಮಾನ್ಯವಾಗಿ ಇಂತಹ ಪ್ರಕರಣದಲ್ಲಿ ಭಾಗಿಯಾಗುವ ಆರೋಪಿಗಳಿಗೆ 3-7 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತೆ. ಕೆಲ ಪ್ರಕರಣಗಳಲ್ಲಿ ಪ್ರಕರಣದ ತೀವ್ರತೆಗೆ ಅನುಸಾರ ದಂಡವನ್ನೂ ಹಾಕಲಾಗುತ್ತೆ. ಅಪರೂಪದ ಅಥವಾ ಸಂರಕ್ಷಿತ ಪ್ರಾಣಿಗಳ ಹತ್ಯೆ/ಸಾಗಾಟಕ್ಕೆ ಕಠೋರ ಶಿಕ್ಷೆ ಇರಲಿದೆ

ಮಾವಿನ ಮರ ಬಿದ್ದು ಹಸು ಸಾವು

ಗಾಳಿ, ಮಳೆಯಿಂದ ಮಾವಿನಮರ ಉರುಳಿಬಿದ್ದ ಪರಿಣಾಮ ಒಂದು ಹಸು ಸಾವನ್ನಪ್ಪಿ ಮತ್ತೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಬಿಣಗಾ ಬಳಿಯ ಕದಂಬ ನೌಕಾನೆಲೆಯ ದ್ವಾರದಲ್ಲಿ ನಡೆದಿದೆ. ಮರಬಿದ್ದ ಪರಿಣಾಮ 7 ಬೈಕ್​ಗಳು ಜಖಂ ಆಗಿದ್ದು, ನೌಕಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೆರವುಕಾರ್ಯ ನಡೆಸಿದ್ದಾರೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love
Share:

administrator

Leave a Reply

Your email address will not be published. Required fields are marked *