ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅವಮಾನ – ಬೀಡಿ ಇಟ್ಟು ವಿಕೃತ ಕೃತ್ಯ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತುಕೊಂಡಿದ್ದಲ್ಲದೇ ಅವರ ಬಾಯಿಗೆ ಬೀಡಿ ಇಟ್ಟು ವ್ಯಕ್ತಿಯೋರ್ವ ವಿಕೃತವಾಗಿ ವರ್ತಿಸಿರುವಂತಹ ಘಟನೆ ನಗರದ ಕೆ.ಆರ್.ವೃತ್ತದಲ್ಲಿ ನಡೆದಿದೆ. ವ್ಯಕ್ತಿಯ ಹುಚ್ಚಾಟ ಕಂಡು ಕೆಲ ಕಾಲ ಜನರು ಗಾಬರಿಯಾಗಿದ್ದರು. ಸದ್ಯ ಪರಾರಿಯಾಗಿರುವ ವ್ಯಕ್ತಿಯ ಪತ್ತೆಗೆ ದೇವರಾಜ ಠಾಣೆ ಪೊಲೀಸರು ಮುಂದಾಗಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಸೂಕ್ತ ರಕ್ಷಣೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು, ಅವರ ಮೇಲೆ ಕುಳಿತಿದ್ದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದರು. ಆದರೆ, ಪೊಲೀಸರು ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿಹೋಗಿದ್ದಾನೆ. ಪೊಲೀಸ್ ವ್ಯವಸ್ಥೆಯ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.