Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ಕೇಂದ್ರ ಸರ್ಕಾರ ಕಡಲೇಕಾಯಿ ತಿನ್ನುತ್ತಿದೆಯಾ?’: ಕಬ್ಬು ದರ ವಿವಾದದಲ್ಲಿ ಮೋದಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಪ್ರಶ್ನೆ

Spread the love

ಮಡಿಕೇರಿ: ಕಬ್ಬು ಬೆಳೆಗಾರರು ಪ್ರತಿಭಟನೆ (Sugar Cane Famers Protest) ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಏನು ಕಡಲೇಕಾಯಿ ತಿನ್ನುತ್ತಿದೆಯಾ? ಅವರಿಗೆ ರೈತರ ಕುರಿತು ಜವಾಬ್ದಾರಿ ಇಲ್ಲವೇ? ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

ಪೊನ್ನಂಪೇಟೆಯಲ್ಲಿ ಮಾತಾನಾಡಿದ ಅವರು, ರಾಜ್ಯ ಸರ್ಕಾರ ಸಭೆ ಕರೆದು ಸಮಸ್ಯೆ ಇತ್ಯರ್ಥಕ್ಕೆ ಶ್ರಮಿಸುತ್ತಿದೆ. ಆದರೆ ಕೇಂದ್ರ ಕೃಷಿ ಸಚಿವರು ಈ ಕುರಿತು ಒಂದೂ ಸಭೆ ಮಾಡಿಲ್ಲ. ಪ್ರಧಾನಿ ಮೋದಿ (PM Modi) ಟ್ವೀಟ್ ಮಾಡಿಲ್ಲ ಎಂದು ಕಿಡಿಕಾರಿದರು. 

ನ್ಯಾಯಯುತ ಮತ್ತು ಲಾಭದಾಯಕ ದರವನ್ನು ನಿಗದಿ ಮಾಡುವುದು, ಸಕ್ಕರೆ ಆಮದು, ರಫ್ತು ನಿಯಮ ಮಾಡುವುದು, ಎಥೆನಾಲ್ ಅನ್ನು ಎಷ್ಟು ಬಳಕೆ ಮಾಡಬೇಕು ಎಂದು ತಿರ್ಮಾನ ಮಾಡುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ. ರಫ್ತು, ಆಮದು ನೀತಿಯು ಕಬ್ಬಿನ ದರದ ಮೇಲೆ , ರೈತರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಎಲ್ಲಾ ತೀರ್ಮಾನಗಳು ಕೇಂದ್ರದ ಕೈಯಲ್ಲಿ ಇವೆ. ಅಧಿಕಾರವೂ ಅವರ ಕೈಯಲ್ಲಿದೆ. ಜವಾಬ್ದಾರಿ ಮಾತ್ರ ಬೇರೆಯವರ ಮೇಲೆ ಎಂದರೆ ಹೇಗೆ ಸಾಧ್ಯ? ಅಧಿಕಾರ ಯಾರ ಕೈಯಲ್ಲಿ ಇದೆ ಅವರು ಜವಾಬ್ದಾರಿ ತೆಗೆದುಕೊಂಡು ಸಮಸ್ಯೆ ಬಗೆಹರಿಸಬೇಕು. ಈ ಕುರಿತು ಪ್ರಧಾನಿಯವರು ಪ್ರತಿಕ್ರಿಯಿಸಬೇಕು ಎಂದರು

ಬಿಜೆಪಿಯ ಇಲ್ಲಿನ ನಾಯಕರು ರೈತರೊಂದಿಗೆ ಮಲಗಿ ಪ್ರತಿಭಟಿಸುವುದನ್ನು ಬಿಟ್ಟು ದೆಹಲಿಗೆ ಹೋಗಿ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿ. ನಾಟಕ ಮಾಡುವುದರಿಂದ ರೈತರಿಗೆ ಅನುಕೂಲ ಆಗುವುದಿಲ್ಲ. ಬಿಜೆಪಿಯ ರಾಜಕೀಯ ಬೇಳೆ ಬೇಯಬಹುದು ಅಷ್ಟೇ ಆದರೆ ರೈತರಿಗೆ ಸಹಾಯ ಆಗುವುದಿಲ್ಲ. ಎಲ್ಲಾ ಅಧಿಕಾರ ಕೇಂದ್ರದ ಕೈಯಲ್ಲಿ ಇದೆ ಹೋಗಿ ಅಲ್ಲಿ ಕುಳಿತು ಪರಿಹರಿಸಿ ರೈತರಿಗೆ ಅನುಕೂಲ ಮಾಡಲಿ ಎಂದು ಹೇಳಿದರು.

ಕೊಡಗಿನಲ್ಲಿ 466 ಕೋಟಿ ರೂ. ವೆಚ್ಚದಲ್ಲಿ ಸೂಕ್ಷ್ಮ ಪ್ರದೇಶಗಳನ್ನು ತಜ್ಞರ ನೆರವಿನಿಂದ ಗುರುತಿಸಿ ಭೂಕುಸಿತ ತಡೆಯುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.


Spread the love
Share:

administrator

Leave a Reply

Your email address will not be published. Required fields are marked *